
ಜೈಪುರ (ಜ.06): ಸರ್ಕಾರದ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಶಾಸಕ ಜಗದೀಶ್ ನಾರಾಯಣ್ ಮೀನಾರ ಪುತ್ರ, ಇದೀಗ ಹುದ್ದೆಗೆ ಆಯ್ಕೆಯಾಗಿ ಅಚ್ಚರಿ ಮೂಡಿಸಿದ್ದಾರೆ. ವಿಷಯ ಇದೀಗ ವಿವಾದಕ್ಕೂ ಕಾರಣವಾಗಿದೆ.
ರಾಜಸ್ಥಾನ ವಿಧಾನಸಭಾ ಭವನ ದಲ್ಲಿ 18 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕೆ 129 ಎಂಜಿನಿಯರ್ಗಳು, 23 ವಕೀಲರು, 393 ಪದವೀಧರರೂ ಸೇರಿ 12453 ಜನ ಅರ್ಜಿ ಹಾಕಿದ್ದರು. ಅವರೆಲ್ಲರನ್ನೂ ಹಿಂದಿಕ್ಕಿ 10ನೇ ತರಗತಿ ಓದಿರುವ ಬಿಜೆಪಿ ಶಾಸಕನ ಪುತ್ರ ಆಯ್ಕೆಯಾಗಿದ್ದಾರೆ. ಇದು ಹೇಗೆ ಸಾಧ್ಯವಾಯ್ತು ಎಂದು ವಿಪಕ್ಷಗಳು ಪ್ರಶ್ನಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.