
ಲಕ್ನೋ : ಶ್ರೀ ರಾಮ ಕನಸಿನಲ್ಲಿ ಬರುತ್ತಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಕುಟುಂಬ ಹಿಂದೂ ಧರ್ಮಕ್ಕೆ ಮತಾಂತರವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಇಲ್ಲಿನ ಶಾಮಿಲಿ ನಗರದ ಶಹಜಾದ್ ಅವರ ಕುಟುಂಬ ಹಿಂದೂ ಧರ್ಮಕ್ಕೆ ಮತಾಂತರವಾಗಿ ಹೆಸರನ್ನು ಸಂಜು ರಾಣಾ ಎಂದು ಬದಲಾಯಿಸಿಕೊಂಡಿದ್ದಾರೆ.
ನಮ್ಮ ಪೂರ್ವಜರು ಹಿಂದುಗಳಾಗಿದ್ದ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿತ್ತು. ಕಳೆದ 15 - 20 ದಿನಗಳಿಂದ ಶ್ರೀರಾಮ ನನ್ನ ಕನಸಿನಲ್ಲಿ ಬಂದು ಈ ಬಗ್ಗೆ ಹೇಳುತ್ತಿದ್ದರು ಈ ನಿಟ್ಟಿನಲ್ಲಿ ಮರಳಿ ಹಿಂದೂ ಧರ್ಮಕ್ಕೆ ಬಂದಿರುವುದಾಗಿ ಅವರು ಹೇಳಿದ್ದಾರೆ.
ಅಲ್ಲದೇ ನಮಗೆ ಯಾರೂ ಕೂಡ ಹಿಂದೂ ಧರ್ಮವನ್ನು ಸ್ವೀಕಾರ ಮಾಡಲು ಒತ್ತಾಯ ಮಾಡಲಿಲ್ಲ. ಯಾವುದೇ ಒತ್ತಡಕ್ಕೂ ಒಳಗಾಗದೇ ತಾವು ಸ್ವ ಇಚ್ಛೆಯಿಂದ ಧರ್ಮ ಸ್ವೀಕಾರ ಮಾಡಿದ್ದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ