
ನವದೆಹಲಿ (ಜ.14): ರಜೆಯನ್ನು ಮೊಟಕುಗೊಳಿಸುವಂತೆ ರಕ್ಷಣಾ ಸಚಿವರು ಆದೇಶಿಸಿದ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಹುದ್ದೆಯ ಆಕಾಂಕ್ಷಿಯಾಗಿದ್ದ ಲೆ| ಜ| ಪ್ರವೀಣ್ ಬಕ್ಷಿಯವರು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಸೇವಾ ಹಿರಿತನವಿದ್ದರೂ ಸೇನಾ ಮುಖ್ಯಸ್ಥರ ಹುದ್ದೆಗೆ ತನ್ನ ಹೆಸರನ್ನು ಪರಿಗಣಿಸದಿದ್ದ ಕಾರಣ ಪೂರ್ವವಲಯ ಸೇನಾ ಕಮಾಂಡರ್ ಆಗಿರುವ ಲೆ|ಜ| ಪ್ರವೀಣ್ ಬಕ್ಷಿ ಅಸಮಾಧಾನಗೊಂಡಿದ್ದರು.
ಕಳೆದ ಜ.1 ರಿಂದ ಒಂದು ತಿಂಗಳ ಕಾಲ ರಜೆಯನ್ನು ಕೂಡಾ ತೆಗೆದುಕೊಂಡಿದ್ದರು. ಆದರೆ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ರಜೆಯನ್ನು ಮೊಟಕುಗೊಳಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ, ಇಂದು ಕೊಲ್ಕತ್ತಾ ಕಚೇರಿಯಲ್ಲಿ ಲೆ|ಜ| ಬಕ್ಷಿ ಕೆಲಸಕ್ಕೆ ಹಾಜರಾಗಿದ್ದಾರೆ.
ಸಾಮಾನ್ಯವಾಗಿ ಸೇವಾ ಹಿರಿತನದ ಆಧಾರದಲ್ಲಿ ಸೇನಾ ಮುಖ್ಯಸ್ಥರನ್ನು ನೇಮಿಸಲಾಗುತ್ತದೆ. ಆದರೆ ಈ ಬಾರಿ, ದಶಕಗಳಿಂದ ನಡೆದು ಬಂದ ಸಂಪ್ರದಾಯಕ್ಕೆ ಕೇಂದ್ರ ಸರ್ಕಾರ ತಿಲಾಂಜಲಿ ಇಟ್ಟು, ಲೆ| ಜ| ಬಿಪಿನ್ ರಾವತ್ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.