
ನವದೆಹಲಿ(ಡಿ.17): ಭಾರತದ ಎರಡು ಪ್ರಮುಖ ರಕ್ಷಣಾ ವಿಭಾಗಗಳಾದ ಭೂಸೇನೆ ಹಾಗೂ ವಾಯುಸೇನೆಗೆ ನೂತನ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ. ಭೂಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ನೇಮಕವಾಗಿದ್ದರೆ, ವಾಯುಸೇನೆಯ ನಾಯಕತ್ವವನ್ನು ವಾಯುಸೇನೆಯ ಉಪಮುಖ್ಯಸ್ಥರಾಗಿದ್ದ ಬೀರೇಂಧರ್ ಸಿಂಗ್ ಧನೋವಾ ವಹಿಸಿಕೊಂಡಿದ್ದಾರೆ.
ಡಿಸೆಂಬರ್ 31 ರಂದು ನಿವೃತ್ತಿಯಾಗಲಿರುವ ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಸ್ಥಾನಕ್ಕೆ ರಾವತ್ ನೇಮಕವಾಗಿದ್ದಾರೆ.
ಪ್ರಸಕ್ತ ವರ್ಷದ ಆರಂಭದಲ್ಲೇ ರಾವತ್ ಸೇನೆಯ ಉಪಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಸೇನೆಯ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವಿರುವ ರಾವತ್ 'ಸ್ವಾರ್ಡ್ ಆಫ್ ಹಾನರ್' ಗೌರವಕ್ಕೂ ಭಾಜನರಾಗಿದ್ದಾರೆ.
ಇನ್ನು ಧನೋವಾ ಪ್ರಸ್ತುತ ವಾಯುಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರ್ಗಿಲ್ ಯುದ್ಧ ಸೇರಿದಂತೆ ಬಹುತೇಕ ಕಾರ್ಯಚರಣೆಯನ್ನು ಮುನ್ನೆಡೆಸಿರುವ ಅನುಭವವಿರುವ ಧನೋವಾ ವಾಯುಸೇನೆಯ ವಿವಿಧ ಹಂತದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.