
ನವದೆಹಲಿ(ಸೆ.01): ಈಸ್ಟರ್ನ್ ಕಮಾಂಡ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರನ್ನು ಭಾರತೀಯ ಭೂಸೇನೆಯ ಉಪ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಅವರಿಂದ ಖಾಲಿಯಾದ ಸ್ಥಾನವನ್ನು ನಾರವಾನೆ ಅಲಂಕರಿಸಿದ್ದು, ಯುದ್ಧದ ಕಾರ್ಮೊಡದ ನಡುವೆ ನಾರವಾನೆ ಮಹತ್ವದ ಜವಾಬ್ದಾರಿ ಪಡೆದಿದ್ದಾರೆ.
ಲೆಫ್ಟಿನೆಂಟ್ ಜನರಲ್ ನಾರವಾನೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ಮಿಲಿಟರಿ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದು, ಸುಮಾರು ನಾಲ್ಕು ದಶಕಗಳ ಮಿಲಿಟರಿ ವೃತ್ತಿಜೀವನದಲ್ಲಿ ಹಲವು ಪ್ರಮುಖ ಸವಾಲುಗಳನ್ನು ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮೂರು ವರ್ಷಗಳ ಕಾಲ ಮ್ಯಾನ್ಮಾರ್’ನ ಭಾರತೀಯ ರಾಯಭಾರ ಕಚೇರಿಯಲ್ಲಿ ಡಿಫೆನ್ಸ್ ಅಟ್ಯಾಚ್ ಆಗಿ ಕಾರ್ಯನಿರ್ವಹಿಸಿದ ಅನುಭವ ಕೂಡ ನಾರವಾನೆ ಅವರಿಗಿದೆ. ನಾರವಾನೆ 'ಪರಮ್ ವಿಶಿಷ್ಠ ಸೇವಾ ಪದಕ'ಕ್ಕೂ ಭಾಜನರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.