
ಲಖನೌ(ಮಾ.25): ಲೈಸೆನ್ಸ್ ಇಲ್ಲದ ಕಸಾಯಿ ಖಾನೆಗಳು ಹಾಗೂ ಮಾಂಸದ ಮಳಿಗೆಗಳ ಮೇಲೆ ಸರ್ಕಾರ ಕ್ರಮ ಜರುಗಿಸುತ್ತಿರುವುದನ್ನು ವಿರೋಧಿಸಿ ಉತ್ತರಪ್ರದೇಶದ ಮಾಂಸ ವ್ಯಾಪಾರಿಗಳು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಲಖನೌ ಸೇರಿದಂತೆ ರಾಜ್ಯದ ಹಲವಾರು ನಗರಗಳಲ್ಲಿ ಮೇಕೆ, ಕೋಳಿ ಮಾಂಸ ಮಾರಾಟವೂ ಸ್ಥಗಿತಗೊಂಡಿದೆ. ಇದರ ಫಲವಾಗಿ ತರಕಾರಿಗಳ ಬೆಲೆ ಗಗನಕ್ಕೇರುವ ಭೀತಿ ಹುಟ್ಟಿಕೊಂಡಿದೆ.
ಕಸಾಯಿಖಾನೆ ಹಾಗೂ ಮಾಂಸದಂಗಡಿ ಬಂದ್ ಮಾಡುವ ಸರ್ಕಾರ ನಿರ್ಧಾರ ವಿರೋಧಿಸಿ ಎಲ್ಲ ಮಾಂಸ ವ್ಯಾಪಾರಿಗಳು ಇಂದಿನಿಂದ ಅನಿರ್ದಿಷ್ಟಾವಧಿಗೆ ಮುಷ್ಕರಕ್ಕೆ ಕರೆ ನೀಡಿದ್ದರಾದರೂ, ಲಖನೌದಲ್ಲಿ ಶೇ.80ರಷ್ಟು ಅಂಗಡಿಗಳು ಶುಕ್ರವಾರವೇ ಬಂದ್ ಆಗಿವೆ. ಹೀಗಾಗಿ ಲಖನೌದಲ್ಲಿ ಮಾಂಸಾಹಾರ ದುರ್ಲಭವಾಗಿದ್ದು, ಎಲ್ಲರೂ ಸಸ್ಯಾಹಾರಕ್ಕೆ ಒಗ್ಗಿಕೊಳ್ಳುವಂತಾಗಿದೆ. ಮಾಂಸಾಹಾರಿ ಹೋಟೆಲ್'ಗಳೂ ಈಗ ಸಸ್ಯಾಹಾರಿಯಾಗಿ ಪರಿವರ್ತಿತವಾಗಿವೆ.
ಈ ಹೋರಾಟಕ್ಕೆ ಅಲಹಾಬಾದ್ ಮತ್ತಿರೆಡೆಗಳಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.