
ಲಕ್ನೋ : ಲಕ್ನೋ ವಿಶ್ವವಿದ್ಯಾಲಯದ ಬಿ ಕಾಂ ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಯೊಂದು ಇದೀಗ ತೀವ್ರ ವಿವಾದಕ್ಕೆ ಎಡೆ ಮಾಡಿದೆ. ಅದರಲ್ಲಿ ಮೋದಿ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ.
ಈ ಸಂಬಂಧ ವಿಶ್ವವಿದ್ಯಾಲಯದ ಎಡ ಪಂಥೀಯ ಸಂಘಟನೆ ವಿದ್ಯಾರ್ಥಿಗಳು ಈ ಪ್ರಶ್ನೆ ಪತ್ರಿಕೆಯನ್ನು ತಯಾರು ಮಾಡಿದ ವಿಶ್ವವಿದ್ಯಾಲಯದ ಮಂಡಳಿ ವಿರುದ್ಧ ಪ್ರತಿಭಟನೆಯನ್ನು ನಡೆಸಿವೆ. ಇದೀಗ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿದ ವಿಶ್ವವಿದ್ಯಾಲಯದ ಕುಲಪತಿ ಎಸ್’ಪಿ ಸಿಂಗ್ ಅವರು ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ. ವಾರ್ಷಿಕ ಪರೀಕ್ಷೆಯಲ್ಲಿ ನಡೆದ ಪ್ರಶ್ನೆ ಪತ್ರಿಕೆ ವಿವಾದ ಸಾಕಷ್ಟು ಚರ್ಚೆಗೂ ಕೂಡ ಕಾರಣವಾಗಿದೆ. ಅಲ್ಲದೇ ಪ್ರಮುಖ ಯೋಜನೆಗಳ ಬಗ್ಗೆ ವಿವರಣೆಯನ್ನು ಕೂಡ ಕೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.