
ಹುಬ್ಬಳ್ಳಿ : ಖಗ್ರಾಸ ಚಂದ್ರಗ್ರಹಣದ ವೇಳೆ ಸಾಮೂಹಿಕವಾಗಿ ಊಟ ಮಾಡುವ ಮೂಲಕ ಹುಬ್ಬಳ್ಳಿಯಲ್ಲಿ ಮೂಢನಂಬಿಕೆ ವಿರುದ್ಧ ಜಾಗೃತಿ ನಡೆಸಿದರು.
ಹುಬ್ಬಳ್ಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಕರ್ನಾಟಕ ಸಂಗ್ರಾಮ ಸೇನೆ ಹಾಗೂ ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸು, ಗ್ರಹಣದ ವೇಳೆಯೇ ಸಾಮೂಹಿಕ ಊಟ ಮಾಡಿದರು.
ಜೋತಿಷಿಗಳು ಗ್ರಹಣದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಜನರಿಗೆ ಮೋಸ ಮಾಡುತ್ತಾ ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಜ್ಯೋತಿಷಿಗಳ ಮಾತು ನಂಬಬೇಡಿ. ಗ್ರಹಣ ಬಗ್ಗೆ ತಪ್ಪು ತಿಳುವಳಿಕೆ ಇಟ್ಟುಕೊಳ್ಳಬೇಡಿ ಎಂದು ಮನವಿ ಮಾಡಿದರು. ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ೀ ಕಾರ್ಯಕ್ಕೆ ಸಾಥ್ ನೀಡಿದರು.
ಖಡಕ್ ರೊಟ್ಟಿ, ಶೇಂಗಾ ಚಟ್ನಿ, ಜಿಲೇಬಿ, ಶೇಂಗಾ ಹೋಳಿಗೆ, ಅನ್ನ ಸಾಂಬಾರು ಸೇರಿದಂತೆ ಬಗೆ ಬಗೆಯ ತಿನಿಸುಗಳನ್ನು ಮಾಡಿಕೊಂಡು ಬಂದು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಊಟ ಮಾಡಿದರು.
ಸಂಘಟನೆಗಳ ಮುಖಂಡರಾದ ರಮೇಶ ವಡಪಲ್ಲಿ, ರತ್ನಾ ವಡಪಲ್ಲಿ, ಹನುಮಂತಪ್ಪ ಪವಾಡಿ, ಬಸವರಾಜ ಮನ್ನೂರುಮಠ, ಮಾರೇಶ, ಮಂಗಳೇಶ, ಪ್ರಾರ್ಥನಾ ವಡಪಲ್ಲಿ, ಸಂಜೀವ ದುಮಕನಾಳ ಸೇರಿದಂತೆ ಹಲವರು ಈ ವೇಳೆ ಸ್ಥಳದಲ್ಲಿ ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.