ಭಕ್ತರ ಗಮನಕ್ಕೆ : ಉಡುಪಿ, ಕುಕ್ಕೆಯಲ್ಲಿ ದೇವರ ದರ್ಶನ ಸ್ಥಗಿತ

By Web DeskFirst Published Jul 26, 2018, 10:16 AM IST
Highlights

ಉಡುಪಿ ಮತ್ತು ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಚಂದ್ರಗ್ರಹಣದ ಪ್ರಯುಕ್ತ ಪೂಜೆ ಹಾಗೂ ದರ್ಶನ ಸಮಯದಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಲಾಗಿದೆ. 

ಬೆಂಗಳೂರು: ಖಗ್ರಾಸ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ, ದರ್ಶನಗಳ ಸಮಯಗಳಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಲಾಗಿದೆ ಎಂದು ದೇವಸ್ಥಾನಗಳ ಆಡಳಿತ ಮಂಡಳಿಗಳು ತಿಳಿಸಿವೆ. ಮಂತ್ರಾಲಯದಲ್ಲಿ ಗ್ರಹಣದ 7, 8 ಗಂಟೆಗಳ ಮುಂಚೆ ಮಠದ ಪೂಜೆ ಸ್ಥಗಿತಗೊಳ್ಳಲಿದ್ದು, ಗ್ರಹಣ ದೋಷ ರಾಶಿಗಳ ಹೋಮ ಹವನ ನೆರವೇರಿಸಲಾಗುವುದು. 

ಕುಕ್ಕೆಸುಬ್ರಹ್ಮಣ್ಯ  ದಲ್ಲಿ ರಾತ್ರಿ 7 ರ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಸಂಜೆ ಆಶ್ಲೇಷ ಬಲಿ ನೆರವೇರುವುದಿಲ್ಲ. ರಾತ್ರಿ ಭಕ್ತರಿಗೆ ಭೋಜನ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ಕೊಲ್ಲೂರು ದೇವಸ್ಥಾನದಲ್ಲಿ ರಾತ್ರಿ ಭಕ್ತರಿಗೆ ಊಟ ಇಲ್ಲ. ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಜೆ 6 ರೊಳಗೆ ಪೂಜೆ ಮುಕ್ತಾಯವಾಗಲಿದೆ.

click me!