
ಚೆನ್ನೈ(ಜೂ.21): 92 ವರ್ಷದ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ 84ನೇ ಗೌರವ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ಸುಸ್ಥಿರ ಕೃಷಿ ವಿಧಾನ ಹಾಗೂ ಜಾಗತಿಕ ಆಹಾರ ಭದ್ರತೆ ವಿಚಾರದಲ್ಲಿ ನಡೆಸಿದ ಸಂಶೋಧನೆಗಾಗಿ ಗ್ವಾಲಿಯರ್ ಐಟಿಎಂ ವಿವಿಯಿಂದ ಡಾಕ್ಟರ್ ಆಫ್ ಲೆಟರ್ಸ್ ಡಿಗ್ರಿ ಪಡೆದುಕೊಂಡಿದ್ದಾರೆ.
ಸ್ವಾಮಿನಾಥನ್ ತಮ್ಮ 92 ವಯಸ್ಸಿನಲ್ಲಿ 84ನೇ ಗೌರವ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದು, ಇದರಲ್ಲಿ 24 ಗೌರವ ಡಾಕ್ಟರೇಟ್ ಪದವಿಗಳು ವಿವಿಧ ಅಂತರಾಷ್ಟ್ರೀಯ ವಿವಿಗಳಿಂದ ಲಭಿಸಿವೆ. ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಫೌಂಡೇಶನ್ ಆವರಣದಲ್ಲಿ ನಡೆದ ವಿಶೇಷ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಅವರಿಗೆ 84ನೇ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ವಿವಿಯ ಕುಲಪತಿ ಡಾ.ಕಮಲ್ ಕಂತ್ ದ್ವಿವೇದಿ ಅವರು ಎಂ.ಎಸ್. ಸ್ವಾಮಿನಾಥನ್ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ಸ್ವಾಮಿನಾಥನ್, ಸುಸ್ಥಿರ ಕೃಷಿಯಿಂದ ಮಾತ್ರ ಹಸಿವು ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.