
ಮಂಡ್ಯ ಜೂನ್ 15: ಟಿಕೆಟ್ ಸಿಕ್ಕರೂ ಸ್ಪರ್ಧೆ ಮಾಡದೇ ಕಾಂಗ್ರೆಸ್ ಹೈ ಕಮಾಂಡಿಗೆ ಸವಾಲು ಎಸೆದಿದ್ದ ರೆಬಲ್ ಸ್ಟಾರ್ ಅಂಬರೀಶ್ ಫೋಟೋ ಈಗ ಜೆಡಿಎಸ್ ನಾಯಕರ ಪ್ಲೆಕ್ಸ್ ಗಳಲ್ಲಿ ರಾರಾಜಿಸುತ್ತಿದೆ.
ರಾಜಕಾರಣಕ್ಕೆ ಅಂಬಿ ವಿದಾಯ ಹೇಳುವ ಮಾತನ್ನಾಡಿದ್ದರು. ಕಾಂಗ್ರೆಸ್ ಪರ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡದೇ ಅಂಬರೀಶ್ ಅಂತರ ಕಾಯ್ದುಕೊಂಡಿದ್ದರು. ಮಂಡ್ಯದಲ್ಲಿ ಏಳಕ್ಕೆ ಏಳು ವಿಧಾನಸಭಾ ಕ್ಷೇತ್ರದಲ್ಲೂ ಜೆ ಡಿಎಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದರು,
ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣರ ಸ್ವಾಗತಕ್ಕೆ ಮದ್ದೂರಿನಲ್ಲಿ ಹಾಕಲಾಗಿರುವ ಪ್ಲೆಕ್ಸ್ ಗಳಲ್ಲಿ ಅಂಬಿ ಫೋಟೋ ರಾರಾಜಿಸುತ್ತಿದ್ದು ಇದನ್ನು ಕಂಡ ಕಾಂಗ್ರೆಸ್ಸಿಗರೇ ತಬ್ಬಿಬ್ಬಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.