ಕೇರಳದಂತೆ ಗೋವಾಕ್ಕೂ ಕಾದಿದೆ ಕಂಟಕ

Published : Aug 20, 2018, 09:09 AM ISTUpdated : Sep 09, 2018, 08:38 PM IST
ಕೇರಳದಂತೆ ಗೋವಾಕ್ಕೂ ಕಾದಿದೆ ಕಂಟಕ

ಸಾರಾಂಶ

 ಪರಿಸರ ರಕ್ಷಣೆಗೆ ಕ್ರಮ ಕೈಗೊಳ್ಳದಿದ್ದರೆ ಭಾರೀ ಹಾನಿ: ಮಾಧವ್ ಗಾಡ್ಗೀಳ್ ಎಚ್ಚರಿಕೆ ಪ್ರವಾಹ ಉಂಟಾದರೆ ಕೇರಳ ರೀತಿ ಭಾರೀ ಸಮಸ್ಯೆಗೆ ಸಿಲುಕಲಿದೆ ಗೋವಾ

ಪಣಜಿ (ಆ. 20):  ಒಂದು ವೇಳೆ ಪರಿಸರ ರಕ್ಷಣೆಗೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದೇ ಇದ್ದರೆ ಪ್ರವಾಹದಿಂದ ನಲುಗಿರುವ ಕೇರಳದ ಸ್ಥಿತಿಯೇ ಗೋವಾಕ್ಕೂ ಬಂದೊದಗಲಿದೆ ಎಂದು ಖ್ಯಾತ ಪರಿಸರ ತಜ್ಞ ಮಾಧವ್ ಗಾಡ್ಗೀಳ್ ಎಚ್ಚರಿಕೆ ನೀಡಿದ್ದಾರೆ.

ಇತರ ರಾಜ್ಯಗಳಂತೆ ಗೋವಾದಲ್ಲೂ ಅನಿಯಮಿತ ಲಾಭಕ್ಕಾಗಿ ಪರಿಸರ ನಾಶ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟದ ಅರಣ್ಯ  ಪ್ರದೇಶಗಳಲ್ಲಿ ಎಲ್ಲ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಗೋವಾದಲ್ಲಿ ಕೇರಳದಲ್ಲಿ ಇದ್ದಷ್ಟು ಪಶ್ಚಿಮ ಘಟ್ಟ ಪ್ರದೇಶಗಳು ಇಲ್ಲದೇ ಇದ್ದರೂ ಗೋವಾದಲ್ಲಿ ಮಳೆಯಿಂದ ಅಪಾರ ಹಾನಿ ಸಂಭವಿಸಲಿದೆ. ನ್ಯಾ. ಎಂ.ಬಿ. ಶಾ ಅವರ ಆಯೋಗ ಗೋವಾದಲ್ಲಿ 35,000 ಕೋಟಿ ರು. ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ತಿಳಿಸಿದೆ ಎಂದು ಗಾಡ್ಗೀಳ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲ ವರ್ಷಗಳಹಿಂದೆ ಪಶ್ಚಿಮ ಘಟ್ಟಗಳ ಅಧ್ಯಯನಕ್ಕೆ ಸರ್ಕಾರ ನೇಮಿಸಿದ್ದ ಸಮಿತಿಯ ನೇತೃತ್ವವನ್ನು ಗಾಡ್ಗೀಳ್ ವಹಿಸಿದ್ದರು. ಅವರು ನೀಡಿದ್ದ ವರದಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಗೋವಾದಲ್ಲಿ ಲಾಭದ ಉದ್ದೇಶಕ್ಕಾಗಿ ಪರಿಸರಕ್ಕೆ ವ್ಯಾಪಕ ಹಾನಿ ಉಂಟು ಮಾಡಲಾಗಿದೆ. ಗಣಿಗಾರಿಕೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ. ಒಂದು ವೇಳೆ ಪರಿಸರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳದೇ ಇದ್ದರ ಮುಂದೊಂದು ದಿನ ಈಗ ಕೇರಳದಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿ ಗೋವಾದಲ್ಲೂ ಸಂಭವಿಸಿದರೆ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!
India Latest News Live: ಪಹಲ್ಗಾಂ ಉಗ್ರ ದಾಳಿ: ಕೋರ್ಟ್‌ಗೆ 1597 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ