
ಮದುರೈ (ಜ.15): ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಸಹ ಕಡ್ಡಾಯವಾಗಿ ಜೀವವಿಮೆಯನ್ನು ಮಾಡಿಸಲೇಬೇಕು ಎಂದು ತಮಿಳುನಾಡಿನ ಮದುರೈ ಜಿಲ್ಲಾಡಳಿತ ಸೂಚನೆ ನೀಡಿದೆ.
ಜೀವದ ಹಂಗು ತೊರೆದು ಹೋರಿಯನ್ನು ಹಿಡಿಯುವ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಇದೇ ಮೊದಲ ಬಾರಿಗೆ ಇಂಥ ಸುರಕ್ಷತಾ ಪಾಲಿಸಿ ಮಾಡಿಸಲಾಗುತ್ತಿದೆ. ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸುವವರು ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆಯಡಿ ವಿಮೆ ಮಾಡಿಸಲೇಬೇಕು.
ಈ ಪಾಲಿಸಿಯು 2 ಲಕ್ಷ ರು. ಅಪಘಾತ ವಿಮೆಯನ್ನು ಒಳಗೊಂಡಿರುತ್ತದೆ. ಒಂದು ವೇಳೆ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಸ್ಪರ್ಧಾಳು ಮೃತರಾದರೆ, ಈ ವಿಮೆಯನ್ನು ಅವರ ಕುಟುಂಬಸ್ಥರು ಕ್ಲೇಮ್ ಮಾಡಿಕೊಳ್ಳಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.