
ಭೋಪಾಲ್(ಮೇ.16): ಮಧ್ಯಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರೆಸೆಂಟ್, ಎಸ್ ಮೇಡಮ್/ಸರ್ ಎನ್ನುವ ಬದಲು ಜೈಹಿಂದ್ ಎನ್ನಬೇಕು' ಇಂತಹ ಆದೇಶವನ್ನು ಅಲ್ಲಿನ ಸರ್ಕಾರ ಆದೇಶಿಸಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರ ಈ ಆದೇಶ ಹೊರಡಿಸಿದ್ದು ಉಪಾಧ್ಯಾಯರು ಹಾಜರಿ ನಮೂದಿಸಲು ವಿದ್ಯಾರ್ಥಿಗಳ ಹೆಸರನ್ನು ಕರೆದಾಗ ಪ್ರೆಸೆಂಟ್, ಎಸ್ ಮೇಡಮ್/ಸರ್ ಎನ್ನುವ ಬದಲು ಜೈಹಿಂದ್ ಎನ್ನಬೇಕು' ಎಂದು ಆದೇಶಿಸಲಾಗಿದೆ.
ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿ ಸಹಿ ಒಳಗೊಂಡ ಆದೇಶವನ್ನು ಹೊರಡಿಸಲಾಗಿದೆ. ಸೆಪ್ಟಂಬರ್ 2017ರಲ್ಲಿ ಸಾತ್ನಾ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಪೈಲೆಟ್ ಆಧಾರದ ಮೇಲೆ ಶಿಕ್ಷಣ ಸಚಿವರು ಪರಿಚಯಿಸಿದ್ದರು. ಈಗ 7 ತಿಂಗಳ ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ದೇಶಾಭಿಮಾನವನ್ನು ತುಂಬುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ದೀಪಕ್ ಜೋಷಿ ಸಮರ್ಥನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.