
ಭೋಪಾಲ್: ರಾಜ್ಯ ಸರ್ಕಾರ ವೃತ್ತಿ ತರಬೇತಿ ಶಿಕ್ಷಣದ ಪರೀಕ್ಷೆಗಳನ್ನು ಆನ್ಲೈನ್ನಲ್ಲೇ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳ ಗುಂಪೊಂದು, ನಾವು ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಕಾಲೇಜಿನಲ್ಲೇ ಶಪಥ ಸ್ವೀಕರಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಆನ್ಲೈನ್ನಲ್ಲಿ ಪರೀಕ್ಷೆ ನಡೆಸುವುದಕ್ಕೆ ವಿದ್ಯಾರ್ಥಿಗಳ ಆಕ್ಷೇಪವಿದೆ. ಹೀಗಾಗಿ ಭೋಪಾಲ್ನ ವಿಜಯಲಕ್ಷ್ಮೀ ಇಂಡಸ್ಟ್ರಿಯಲ್ ಟ್ರೇನಿಂಗ್ ಇನ್ಸಿಟಿಟ್ಯೂಟ್ನ ವಿದ್ಯಾರ್ಥಿಗಳು, ಕಾಲೇಜಿನ ಆವರಣದಲ್ಲೇ ಶಪಥ ಸ್ವೀಕರಿಸಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಆನ್ ಲೈನ್ ಪರೀಕ್ಷೆ ಪದ್ಧತಿ ಸ್ಥಗಿತಗೊಳಿಸುವವರೆಗೂ ನಾವು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ವಿದ್ಯಾರ್ಥಿಗಳು ಈ ವೇಳೆ ಘೋಷಿಸಿದರು.
ಅಲ್ಲದೆ ಪ್ರತಿ ವಿದ್ಯಾರ್ಥಿ ಗಳು, ಮುಂದಿನ 24 ಗಂಟೆಯ ಅವಧಿಯಲ್ಲಿ ಬೇರೆ ಬೇರೆ ಮೂವರಿಂದ ಇದೇ ರೀತಿಯ ಶಪಥ ಮಾಡಿಸುವ ಶಪಥವನ್ನೂ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.