
ಮಡಿಕೇರಿ(ಡಿ. 18): ದಿಡ್ಡಳ್ಳಿಯಲ್ಲಿ ಗಿರಿಜನರನ್ನು ಒಕ್ಕಲೆಬ್ಬಿಸುವ ಕಾರ್ಯದ ವಿರುದ್ಧ ಬುಡಕಟ್ಟು ನಿವಾಸಿಗಳು ಹೋರಾಟ ತೀವ್ರಗೊಳಿಸಿದ್ದಾರೆ. ಹೋರಾಟಗಾರ್ತಿ ಮುತ್ತಮ್ಮ ಸೇರಿದಂತೆ ಕೆಲ ಗಿರಿಜನ ವಾಸಿಗಳು ಬೆತ್ತಲೆ ಮೆರವಣಿಗೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆ ಸೇರಿದಂತೆ ಗಿರಿಜನರು ಬೆತ್ತಲಾಗಿ ಓಡಿದರೂ ಪೊಲೀಸರು ಅದನ್ನು ತಡೆಯುವ ಪ್ರಯತ್ನ ಮಾಡಲೇ ಇಲ್ಲ. ಇವರ ಎಕ್ಸ್'ಕ್ಲೂಸಿವ್ ದೃಶ್ಯಗಳು ಸುವರ್ಣನ್ಯೂಸ್'ನಲ್ಲಿ ಪ್ರಸಾರವಾಗಿವೆ.
ಗಿರಿಜನರ ಬದುಕಿನ ಬಗ್ಗೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ಧೋರಣೆ ತಾಳಿವೆ. ಬದುಕುವ ಹಕ್ಕನ್ನು ಸಂವಿಧಾನ ನೀಡಿದ್ದರೂ ಗಿರಿಜನರಿಗೆ ಅದಿನ್ನೂ ಗಗನಕುಸುಮವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಡಿಸೆಂಬರ್ 7 ರಂದು ಮುಂಜಾನೆ ಅರಣ್ಯ ಇಲಾಖೆ ಅಧಿಕಾರಿಗಳು 577 ಆದಿವಾಸಿ, ಗಿರಿಜನ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.