
ನವದೆಹಲಿ: ಹಲವು ಗೊಂದಲ ಮತ್ತು ವಿವಾದಗಳ ನಡುವೆಯೇ ಮುಕ್ತಾಯವಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟಕ್ಕೆ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಮಧ್ಯಂತರ ತಡೆ ಹೇರಿದೆ.
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗಾಗಿ ಮೇ 7ರಂದು ನಡೆದ ನೀಟ್ ಪರೀಕ್ಷೆ ವೇಳೆ ಹಿಂದಿ, ಆಂಗ್ಲ ಮತ್ತು ತಮಿಳು ಭಾಷೆ ಸೇರಿದಂತೆ ಇನ್ನಿತರ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳಲ್ಲಿ ಒಂದೇ ರೀತಿಯ ಪ್ರಶ್ನೆಗಳಿರಲಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ, ನೀಟ್ ಫಲಿತಾಂಶ ಘೋಷಣೆ ಮಾಡದಂತೆ ಸಿಬಿಎಸ್ಇಗೆ ಹೈಕೋರ್ಟ್ ತಡೆ ಹೇರಿದೆ.
ನೀಟ್ ಪರೀಕ್ಷೆಗೆ ಸಂಬಂಧಿಸಿ ಅಂತಿಮ ಆದೇಶ ನೀಡುವವರೆಗೂ ಅಂದರೆ ಜೂ.8ರವರೆಗೂ ಯಾವುದೇ ಕಾರಣಕ್ಕೂ ಫಲಿತಾಂಶ ಪ್ರಕಟಿಸದಂತೆ ಸಿಬಿಎಸ್ಇಗೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಕುರಿತು ಮೇ 22ರಂದು ವಿಚಾರಣೆ ನಡೆಸಿದ್ದ ನ್ಯಾ.ಆರ್.ಮಹದೇವನ್ ನೇತೃತ್ವದ ರಜೆ ಪೀಠ, ವೈದ್ಯಕೀಯ ಸೀಟಿಗಾಗಿ ಪ್ರವೇಶಾತಿ ಪರೀಕ್ಷೆ ವೇಳೆ ಸಮಾನತೆ ಕುರಿತು ಸಾರುವ ಸಂವಿಧಾನದ 14ನೇ ವಿಧಿಯನ್ನು ಪರೀಕ್ಷೆ ವೇಳೆ ಉಲ್ಲಂಘಿಸಲಾಗಿದೆ ಎಂಬ ವಿದ್ಯಾರ್ಥಿಯೊಬ್ಬರ ತಾಯಿ ಸಲ್ಲಿಸಿರುವ ಅರ್ಜಿ ಕುರಿತು ಸಿಬಿಎಸ್ಇ ತನ್ನ ನಿಲುವು ತಿಳಿಸುವಂತೆ ಕೋರಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.