
ಲಖನೌ(ಜ.09): ಶಿಕ್ಷಣವನ್ನು ತಿರುಚಿ ವಿದ್ಯಾರ್ಥಿಗಳನ್ನು ಭಯೋತ್ಪಾದನಾ ಕಡೆಗೆ ಸೆಳೆಯುತ್ತಿರುವ ಮದರಸಾಗಳನ್ನು ಮುಚ್ಚಬೇಕೆಂದು ಮುಚ್ಚಬೇಕೆಂದು ಶಿಯಾ ಕೇಂದ್ರ ವಕ್ಫ್ ಮಂಡಳಿ ಅಧ್ಯಕ್ಷ ವಾಸೀಂ ರಿಜ್ವಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.
ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿರುವ ಅವರು, ಈ ರೀತಿಯ ಇಸ್ಲಾಮಿಕ್ ಶಾಲೆಗಳು ಶಿಕ್ಷಣವನ್ನು ಮುಂದುವರೆಸಬೇಕಾದರೆ ಸಿಬಿಎಸ್ಇ ಹಾಗೂ ಐಸಿಎಸ್ಸಿ'ಯಿಂದ ಮಾನ್ಯತೆ ಪಡೆದುಕೊಳ್ಳಬೇಕು. ಮಾನ್ಯತೆ ಪಡೆದುಕೊಳ್ಳದಿರುವ ಎಲ್ಲ ಮುಚ್ಚಿ ಎಂದು ತಿಳಿಸಿದ್ದಾರೆ.
ದೆಶದಲ್ಲಿರುವ ಬಹುತೇಕ ಮದರಸಾಗಳು ಹೆಚ್ಚು ಗುರುತಿಸಿಕೊಂಡಿಲ್ಲ. ಇಂತಹ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗುತ್ತಿದ್ದಾರೆ. ಎಲ್ಲ ನಗರ, ಪಟ್ಟಣ, ಹಳ್ಳಿಗಳಲ್ಲಿ ನಾಯಿಕೊಡೆಗಳಂತಿರುವ ಈ ಮದರಸಾಗಳಿಗೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಭಯೋತ್ಪದನಾ ಸಂಘಟನೆಗಳಿಂದ ನೆರವು ಹರಿದು ಬರುತ್ತಿದೆ' ಎಂದು ರಿಜ್ವಿ ಆಪಾದಿಸಿದ್ದಾರೆ.
ಅತೀ ಕಳಪೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಈ ರೀತಿಯ ಮದರಸಾಗಳಲ್ಲಿ ಬಹುತೇಕರು ಉರ್ದು ಅನುವಾದಕರು ಅಥವಾ ಟೈಪಿಸ್ಟ್'ಗಳಾಗಿ ಮಾತ್ರ ಶಿಕ್ಷಣ ಪಡೆಯುತ್ತಿದ್ದಾರೆ. ಈ ರೀತಿಯ ಸಂಸ್ಥೆಗಳು ಐಸಿಎಸ್ಸಿ ಹಾಗೂ ಸಿಬಿಎಸ್ಸಿ'ಯಿಂದ ಮಾನ್ಯತೆ ಪಡೆಯುವುದರ ಜೊತೆ ಮುಸ್ಲಿಂಯೇತರ ವಿದ್ಯಾರ್ಥಿಗಳಿಗೂ ವ್ಯಾಸಂಗ ಮಾಡಲು ಅವಕಾಶ ನೀಡಬೇಕು. ಈ ಬಗ್ಗೆ ಪ್ರಧಾನಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿಗಳಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ರಿಜ್ವಿ ಆಪಾದನೆಗೆ ಪ್ರತಿಕ್ರಿಯೆ ನೀಡಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಕ್ತಾರ' ಖಲೀಲೂರ್ ರೆಹಮಾನ್ ಸಜ್ಜದ್ ನಾಮನಿ' ಮದರಸಾಗಳು ಸ್ವತಂತ್ರ ಸಂಗ್ರಾಮದಲ್ಲಿ ಬಹುಮುಖ್ಯ ಪಾತ್ರ ವಹಿಸಿವೆ. ಇವುಗಳನ್ನು ಪ್ರಶ್ನಿಸುವ ಮೂಲಕ ರಿಜ್ವಿ ಅವರು ಅಪಮಾನ ಮಾಡುತ್ತಿದ್ದಾರೆ'ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.