
ಬೆಂಗಳೂರು(ಜ. 20): ಪೊಲೀಸರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸಿ ಧಮಕಿ ಹಾಕಿದ ಪ್ರಕರಣದ ಆರೋಪಿ ಮಾಗಡಿ ಶಾಸಕ ಬಾಲಕೃಷ್ಣ ಅವರಿಗೆ ಜಾಮೀನು ಸಿಕ್ಕಿದೆ. ರಾಮನಗರ ಜಿಲ್ಲೆಯ ಮಾಗಡಿಯ ಕೋರ್ಟ್ ಬಾಲಕೃಷ್ಣ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂ.ನ ಬಾಂಡ್ ಪಡೆದುಕೊಂಡಿರುವ ಕೋರ್ಟ್, ಪ್ರತೀವಾರ ಠಾಣೆಗೆ ಹಾಜರಾಗುವಂತೆ, ಹಾಗೂ ಸಾಕ್ಷ್ಯನಾಶ ಮಾಡದಂತೆ ಬಾಲಕೃಷ್ಣಗೆ ಸೂಚನೆ ನೀಡಿದೆ. ಮಾಗಡಿ ಶಾಸಕರು ಖುದ್ದಾಗಿ ಕೋರ್ಟ್'ಗೆ ಇಂದು ಹಾಜರಾಗಿದ್ದರು.
ಮಾಗಡಿಯ ಕುದೂರು ಪೊಲೀಸ್ ಠಾಣೆಗೆ ನುಗ್ಗಿದ್ದ ಜೆಡಿಎಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಠಾಣೆಯ ಸಿಪಿಐ ನಂದೀಶ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪವಿದೆ. ತಾನು ಪೊಲೀಸ್ ಇನ್ಸ್'ಪೆಕ್ಟರ್'ರನ್ನು ನಿಂದಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಾಲಕೃಷ್ಣ ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.