
ಮಹಾರಾಷ್ಟ್ರ (ಫೆ. 23): ಫೋಷಕರು ತಮ್ಮ ಮಕ್ಕಳಿಗೆ ಸಿನಿಮಾ ಹೀರೋ-ಹೀರೋಹಿನ್ ಅಥವಾ ದೇವರ ನಾಮಗಳನ್ನು ನಾಮಕರಣ ಮಾಡುವುದರಲ್ಲಿ ಅಂಥ ವಿಶೇಷತೆ ಏನೂ ಇಲ್ಲ. ಆದರೆ, ಮಹಾರಾಷ್ಟ್ರದ ಲಾತೂರ್ನಲ್ಲಿ ದಂಪತಿ ತಮ್ಮ ಮುದ್ದಿನ ಮಗಳಿಗೆ ‘ಸ್ವಚ್ಛತಾ’ ಎಂದು ಹೆಸರಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರೇಪಣೆ ಪಡೆದು, ಈ ನಾಮಕರಣ ಮಾಡಿದ್ದಾರೆ. ಅಲ್ಲದೆ, ಆಕೆಯನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಲು ಯತ್ನಿಸುತ್ತೇವೆ. ನಿಮ್ಮ ಮಕ್ಕಳಿಗೆ ‘ಸ್ವಚ್ಛತಾ’ ಎಂದು ಹೆಸರಿಡದಿದ್ದರೂ ತೊಂದರೆ ಇಲ್ಲ. ಆದರೆ, ನಿಮ್ಮ ಸುತ್ತ-ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜನರಿಗೆ ಕರೆ ಕೂಡ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.