ಮಹಾದಾಯಿ ವಿವಾದ: ಸಂದಿಗ್ಧ ಸ್ಥಿತಿಯಲ್ಲಿ ಬಿಜೆಪಿ

Published : Sep 19, 2017, 03:44 PM ISTUpdated : Apr 11, 2018, 12:50 PM IST
ಮಹಾದಾಯಿ ವಿವಾದ: ಸಂದಿಗ್ಧ ಸ್ಥಿತಿಯಲ್ಲಿ ಬಿಜೆಪಿ

ಸಾರಾಂಶ

ಮಹಾದಾಯಿ ವಿವಾದ ಬಗೆಹರಿಸಲು ಮಹಾರಾಷ್ಟ್ರ, ಗೋವಾ ಸಿಎಂಗಳ ಜೊತೆ ಮಾತುಕತೆಗೆ ಮುಂದಾಗಿದ್ದ ರಾಜ್ಯ ಬಿಜೆಪಿ  ಅಡಕತ್ತರಿಯಲ್ಲಿ ಸಿಲುಕಿಕೊಂಡಿದೆ.  

ಬೆಂಗಳೂರು (ಸೆ.19): ಮಹಾದಾಯಿ ವಿವಾದ ಬಗೆಹರಿಸಲು ಮಹಾರಾಷ್ಟ್ರ, ಗೋವಾ ಸಿಎಂಗಳ ಜೊತೆ ಮಾತುಕತೆಗೆ ಮುಂದಾಗಿದ್ದ ರಾಜ್ಯ ಬಿಜೆಪಿ  ಅಡಕತ್ತರಿಯಲ್ಲಿ ಸಿಲುಕಿಕೊಂಡಿದೆ.  

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯ ತಲೆದೋರಿದ್ದು  ಬಿಜೆಪಿ  ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಘಟಕ ಹೋರಾಟಕ್ಕೆ ಅಣಿಯಾಗಿದೆ.

ಬಿಜೆಪಿ ರಾಜ್ಯದ ಹಿತಾಸಕ್ತಿ ವಿರುದ್ಧ ಇದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಜನಾಂದೋಲನಕ್ಕೆ ತಯಾರಿ ನಡೆಸಿದೆ. ಕಾಂಗ್ರೆಸ್ ತಂತ್ರದ ಬಗ್ಗೆ  ಮಹಾರಾಷ್ಟ್ರ ಬಿಜೆಪಿ ನಾಯಕರು ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ನೀಡಿದ್ದಾರೆ.  ಹೀಗಾಗಿ ಸೆಪ್ಟೆಂಬರ್ 2ನೇ ವಾರ ಮುಗಿದರೂ ಮಹಾದಾಯಿ  ವಿಚಾರವಾಗಿ ಬಿಜೆಪಿ ಮಾತುಕತೆಗೆ ಮುಂದಾಗಿಲ್ಲ.  ಸೆಪ್ಟೆಂಬರ್ ಮೊದಲ ವಾರದೊಳಗೆ ಮಾತುಕತೆಗೆ ಬಿಜೆಪಿ ನಿಯೋಗ ತೆರಳ ಬೇಕಿತ್ತು. ಆದರೆ ಕಾಂಗ್ರೆಸ್ ನಡೆಯಿಂದ ಏನೂ  ಮಾಡಲಾಗದೆ ಸದ್ಯ ತಟಸ್ಥ ಸ್ಥಿತಿಯಲ್ಲಿ ಇರಲು ಬಿಜೆಪಿ ನಿರ್ಧಾರಿಸಿದೆ.

ಮಹಾದಾಯಿ ಸಮಸ್ಯೆ ಬಗೆಹರಿಸಿ ಚುನಾವಣೆಗೆ ಬಳಸಿಕೊಳ್ಳಲು ರಾಜ್ಯ ಬಿಜೆಪಿ ಅಣಿಯಾಗಿತ್ತು.  ಮಹಾರಾಷ್ಟ್ರ ಮತ್ತು  ಗೋವಾ ಸಿಎಂಗಳ ಜೊತೆ ಮಾತುಕತೆಗೆ ಮುಂದಾಗಿತ್ತು.  ಹೀಗಾಗಿ ಸೆಪ್ಟೆಂಬರ್ ಎರಡನೇ ವಾರದೊಳಗೆ  ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾತುಕತೆಗೆ ತೆರಳಬೇಕಿತ್ತು. ಈಗ ಸಮಸ್ಯೆ ಬಗೆಹರಿಸಲು ಹೋದರೆ ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷಕ್ಕೆ ಪೆಟ್ಟು ಬೀಳಲಿದೆ. ಮಹಾದಾಯಿ ವಿಚಾರ ಸಮಸ್ಯೆ ಬಗೆಹರಿಸದೆ ಹೋದರೆ ಕರ್ನಾಟಕದಲ್ಲಿ ಬಿಜೆಪಿಗೆ ಹೊಡೆತ ಬೀಳಲಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು