
ನರಗುಂದ [ಜು.16]: ಕಳಸಾ, ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನರಗುಂದದಲ್ಲಿ ನಡೆಯುತ್ತಿರುವ ರೈತರ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಟ್ಟಸಂದರ್ಭದಲ್ಲಿ ಮಂಗಳವಾರ ಜು.16 ರಂದು ರೈತ ಸೇನಾ ಕರ್ನಾಟಕ ಹಾಗೂ ಮತ್ತಿತರ ಸಂಘಟನೆಗಳು ನರಗುಂದ ತಾಲೂಕು ಬಂದ್ಗೆ ಕರೆ ನೀಡಿವೆ. ಸರ್ಕಾರದ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಯಾಗುತ್ತಿಲ್ಲ. ಮೂರು ವರ್ಷಗಳ ನಿರಂತರ ಹೋರಾಟಕ್ಕೆ ಸರ್ಕಾರ ಸ್ಪಂದಿಸಿಲ್ಲ ಹಾಗೂ ನ್ಯಾಯಾಧಿಕರಣದ ತೀರ್ಪನ್ನು ಪ್ರಾಮಾಣಿಕವಾಗಿ ಜಾರಿಗೆ ತರುವಲ್ಲಿ ಸಹ ವಿಫಲವಾಗಿದೆ ಎಂದು ಆರೋಪಿಸಿ ಬಂದ್ಗೆ ಕರೆ ನೀಡಲಾಗಿದೆ.
ಮಂಗಳವಾರ ಮುಂಜಾನೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯ ವರೆಗೆ ನರಗುಂದ ಬಂದ್ ಮಾಡಲು ನಿರ್ಧರಿಸಲಾಗಿದೆ. ಕಳಸಾ ಬಂಡೂರಿ ಹಳ್ಳದಿಂದ ಮಲಪ್ರಭಾ ಜಲಾಶಯಕ್ಕೆ 13.42 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ನ್ಯಾಯಾಧಿಕರಣ ಅನುಮತಿ ನೀಡಿ ಹಲವಾರು ತಿಂಗಳುಗಳೇ ಗತಿಸಿದ್ದರೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಮುಂದಾಗುತ್ತಿಲ್ಲ.
ಕೇಂದ್ರ ಸರ್ಕಾರದ ಈ ಧೋರಣೆ ಖಂಡಿಸಿ ಬಂದ್ ಕರೆ ನೀಡಲಾಗಿದೆ ಎಂದು ರೈತ ಸೇನಾದ ಕೋಶಾಧ್ಯಕ್ಷ ಎಸ್.ಬಿ.ಜೋಗಣ್ಣವರ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.