
ಪಣಜಿ: ಮಹದಾಯಿ ವಿಚಾರವಾಗಿ ಕರ್ನಾಟಕದ ವಿರುದ್ಧ ಹರಿಹಾಯ್ದಿರುವ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಂಕರ್, ಕನ್ನಡಿಗರನ್ನು ‘ಹರಾಮಿ’ಗಳೆಂದು ಕರೆದಿದ್ದಾರೆ. ಬಳಿಕ ತನ್ನ ತಪ್ಪಿನ ಅರಿವಾದಕ್ಷಣವೇ ಹೇಳಿಕೆಯನ್ನು ಹಿಂಪಡೆದಿದ್ದಾರೆ.
ಉತ್ತರ ಕರ್ನಾಟಕದ ಕಂಕುಂಬಿ ಪ್ರದೇಶಲ್ಲಿ ಮಹದಾಯಿ ನೀರು ತಿರುಗಿಸುವ ಸ್ಥಳಕ್ಕೆ ಶನಿವಾರ ಪೊಲೀಸ್ ಭದ್ರತೆಯೊಂದಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಪಾಲೇಂಕರ್, ‘ಇವರು ಹರಾಮಿಗಳು, ಏನು ಬೇಕಾದರೂ ಮಾಡಬಹುದು’ ಎಂದಿದ್ದಾರೆ.
ತಪ್ಪಿನ ಅರಿವಾಗುತ್ತಿದ್ದಂತೆ, ಭಾವಾವೇಶದಲ್ಲಿ ಆ ಪದ ಬಳಸಿರುವುದಾಗಿಯೂ, ಅದನ್ನು ನಿರ್ಲಕ್ಷಿಸಲು ಮನವಿ ಮಾಡಿಕೊಂಡಿದ್ದಾರೆ.
ಮಹದಾಯಿ ವಿಚಾರದಲ್ಲಿ ಕರ್ನಾಟಕ ಚಿಲ್ಲರೆ ರಾಜಕೀಯ ಮಾಡುತ್ತಿದೆ. ನಾವು ಮಾನವೀಯ ನೆಲೆಯಲ್ಲಿ ಕುಡಿಯಲು ನೀರು ಕೊಡುವುದಾಗಿ ಯಡಿಯೂರಪ್ಪರಿಗೆ ಪತ್ರ ಬರೆದಿದ್ದರೂ ಅದನ್ನು ಸರ್ಕಾರ ಪರಿಗಣಿಸುತ್ತಿಲ್ಲವೆಂದು ಹರಿಹಾಯ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.