ಮಹದಾಯಿ ಹೋರಾಟ ಬೆಂಬಲಿಸಿ ನಾಳೆ ಉತ್ತರ ಕರ್ನಾಟಕ ಬಂದ್

Published : Dec 26, 2017, 02:45 PM ISTUpdated : Apr 11, 2018, 12:43 PM IST
ಮಹದಾಯಿ ಹೋರಾಟ ಬೆಂಬಲಿಸಿ ನಾಳೆ ಉತ್ತರ ಕರ್ನಾಟಕ ಬಂದ್

ಸಾರಾಂಶ

ಮುಂಜಾನೆ 6 ಗಂಟೆಯಿಂದ ಸಂಜೆ‌ 6 ಗಂಟೆಯವರೆಗೆ ಬಂದ್ ಘೋಷಣೆ ಮಾಡಲಾಗಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ ,ತುರ್ತು ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಬಂದ್ ಮಾಡಲಾಗುತ್ತದೆ. ‌

ಹುಬ್ಬಳ್ಳಿ(ಡಿ.26): ಮಹದಾಯಿ, ಕಳಸಾ ಬಂಡೂರಿ ಹೋರಾಟ ಸಮಿತಿಯಿಂದ ನಾಳೆ ಉತ್ತರ ಕರ್ನಾಟಕ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಉಗ್ರ ಹೋರಾಟ ನಡೆಸಲಾಗುವದು ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಏಕರೂಪದ ನಿರ್ಣಯ ತಗೆದುಕೊಂಡಿದೆ.

50 ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು, ನಾಳೆ ಉತ್ತರ ಕರ್ನಾಟಕ ಸಂಪೂರ್ಣ ಬಂದ್ ಮಾಡುವ ನಿರ್ಧಾರ ತಗೆದುಕೊಂಡಿದ್ದಾರೆ. ಮುಂಜಾನೆ 6 ಗಂಟೆಯಿಂದ ಸಂಜೆ‌ 6 ಗಂಟೆಯವರೆಗೆ ಬಂದ್ ಘೋಷಣೆ ಮಾಡಲಾಗಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ ,ತುರ್ತು ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಬಂದ್ ಮಾಡಲಾಗುತ್ತದೆ. ‌

ಹುಬ್ಬಳ್ಳಿ ‌ಧಾರವಾಡ ಅವಳಿ ನಗರ ಸೇರಿದಂತೆ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ಬಂದ್ ಮಾಡಲಾಗುತ್ತಿದೆ. ರೈತ ಸಂಘಟನೆಗಳು ಸೇರಿದಂತೆ ಕನ್ನಡಪರ ಸಂಘಟನೆ ಸೇರಿದಂತೆ ‌100 ಕ್ಕೂ ಹೆಚ್ಚು ಸಂಘಟನೆಗಳು ಬಂದ್'ಗೆ ಬೆಂಬಲಿಸುತ್ತಿವೆ. ಪ್ರತಿಯೊಂದು ಮನೆಯಿಂದ ಇಬ್ಬರು ವಿದ್ಯಾರ್ಥಿಗಳು ಹೋರಾಟದಲ್ಲಿ ಭಾಗಿಯಾಗಲು ಹೋರಾಟಗಾರರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ

ನಾಳೆ ಬಸ್ ಸಂಚಾರ, ಅಂಗಡಿ ಮುಂಗಟ್ಟು, ಶಾಲಾ‌ಕಾಲೇಜು ಬಂದ್ ಮಾಡಲಾಗುವದು. ಕೇಂದ್ರ ಸರ್ಕಾರದ ಕಚೇರಿಗಳಾದ ಅಂಚೆ ಕಚೇರಿ ಹಾಗೂ ರೈಲು‌ ನಿಲ್ದಾಣ ಹಾಗೂ ಸಂಸದರ ಕಚೇರಿಗೆ ಮುತ್ತಿಗೆ ಹಾಕಲಾಗುವದು ಎಂದು ಹೋರಾಟಗಾರರು ಒಕ್ಕೋರಲ್ಲಿನ ನಿರ್ಣಯ ತಗೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!