
ಬೆಂಗಳೂರು (ಏ. 02): ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಮಹಾಲಕ್ಷ್ಮೀ ಬಡಾವಣೆ ಜನರಿಗೆ ಪ್ರವಾಸ ’ಭಾಗ್ಯ’ ನೀಡಿದ್ದಾರೆ.
ನೀತಿ ಸಂಹಿತೆ ಉಲ್ಲಂಘಿಸಿ ಮಹಾಲಕ್ಷ್ಮೀ ಲೇಔಟ್, ನಂದಿನಿ ಲೇಔಟ್, ವೃಷಬಾವತಿ ನಗರ, ನಾಗಪುರ, ಮಹಾಲಕ್ಷ್ಮಿ ಪುರಂ, ಶಂಕರಮಠ, ಶಕ್ತಿ ಗಣಪತಿನಗರ, ಮರಿಯಪ್ಪನ ಪಾಳ್ಯ ಜನರಿಗೆ ಟೂರ್ ಭಾಗ್ಯ ನೀಡಿದ್ದಾರೆ. ಹತ್ತಾರು ಬಸ್’ಗಳಲ್ಲಿ ಮತದಾರರು ಪ್ರವಾಸಕ್ಕೆ ತೆರಳಿದ್ದಾರೆ.
ನೀತಿ ಸಂಹಿತೆ ಉಲ್ಲಂಘಿಸಿದಕ್ಕೆ ಜೆಡಿಎಸ್ ಶಾಸಕ ಗೋಪಾಲಯ್ಯ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ. ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.