
ಮುಂಬೈ (ಡಿ. 04): ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸ್ವಾಗತಾರ್ಹ ಹೆಜ್ಜೆ ಇರಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಖುದ್ದು ಹೋಗಿ ಕಡತ ತಪಾಸಣೆ ಮಾಡಲು ಮಾಹಿತಿ ಹಕ್ಕಿನ ಅಡಿ ಅವಕಾಶ ನೀಡಿದೆ.
ಮಾಹಿತಿ ಹಕ್ಕು ಅಡಿಯಲ್ಲಿ ಈ ಅವಕಾಶವನ್ನು ಸಾರ್ವಜನಿಕರಿಗೆ ಸರ್ಕಾರ ಕಲ್ಪಿಸಿದೆ. ಈ ಪ್ರಕಾರ, ಜಿಲ್ಲಾ ಮಟ್ಟದ ಕಚೇರಿಗಳು, ನಗರಪಾಲಿಕೆ, ನಗರಸಭೆ, ಪುರಸಭೆಗಳು, ಜಿಲ್ಲಾ ಪಂಚಾಯಿತಿಗಳು ಹಾಗೂ ಇತರ ಕೆಲವು ಕಚೇರಿಗಳಿಗೆ ಪ್ರತಿ ಸೋಮವಾರ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಸಾರ್ವಜನಿಕರು ಭೇಟಿ ನೀಡಿ ಕಡತ ಪರಿಶೀಲನೆ ಮಾಡಬಹುದಾಗಿದೆ.
ಸೋಮವಾರ ರಜಾ ದಿನ ಇದ್ದರೆ ಮರುದಿವಸ ಪರಿಶೀಲಿಸಬಹುದಾಗಿದೆ. ಇದಕ್ಕಾಗಿ ಯಾವುದೇ ಶುಲ್ಕವಿಲ್ಲ ಎಂದು ನ.26ರಂದು ಹೊರಡಿಸಲಾದ ಅಧಿಸೂಚನೆ ಹೇಳಿದೆ. ಆದರೆ ಈ ಆದೇಶವು ಮಹಾರಾಷ್ಟ್ರ ಮಂತ್ರಾಲಯಕ್ಕೆ (ವಿಧಾನಸೌಧದ ಸಚಿವಾಲಯಕ್ಕೆ) ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.