ರಂಗೇರಿದ ಚುನಾವಣೆ ಕಣ: ನಾಲ್ವರು ಬಿಜೆಪಿ ನಾಯಕರ ಉಚ್ಛಾಟನೆ

Published : Oct 11, 2019, 06:03 PM ISTUpdated : Oct 11, 2019, 06:25 PM IST
ರಂಗೇರಿದ ಚುನಾವಣೆ ಕಣ: ನಾಲ್ವರು ಬಿಜೆಪಿ ನಾಯಕರ ಉಚ್ಛಾಟನೆ

ಸಾರಾಂಶ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ರಂಗೇರಿದ್ದು, ಬಿಜೆಪಿ ಹಾಗೂ ಶಿವಸೇನೆ ಮೈತ್ರಿಯಲ್ಲಿ ಅಸಮಾಧಾನಗಳು ಸ್ಫೋಟಗೊಂಡಿದ್ದು, ಬಿಜೆಪಿಯ ನಾಲ್ವರು ನಾಯಕರುಗಳನ್ನು ಅಮಾನತು ಮಾಡಲಾಗಿದೆ.  

ಮುಂಬೈ, (ಅ.11): ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದೆ. ಮತ್ತೊಂದೆಡೆ ಬಿಜೆಪಿ ಹಾಗೂ ಶಿವಸೇನೆ ನಡುವೆ ಮೈತ್ರಿಯಲ್ಲಿ ಭಿನ್ನಾಭಿಪ್ರಾಯಗಳು ಉದ್ಭವಿಸಿದ್ದು, ಕೆಲ ನಾಯಕರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. 

ಬಿಜೆಪಿ ವಿರುದ್ಧ ಬಂಡಾಯದ ಭಾವುಟ ಹಾರಿಸಿದ ಚರನ್ ವಾಗ್ಮರೆ, ಗೀತಾ ಜೈನ್, ಬಾಳಾಸಾಹೆಬ್ ಒಹ್ವಾಲ್, ದಿಲೀಪ್ ದೇಶ್ಮುಖ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಚುನಾವಣೆಗೂ ಮುನ್ನ ಸ್ವಪಕ್ಷೀಯರಿಂದಲೇ ಶಿವಸೇನೆಗೆ ಬಿಗ್‌ ಶಾಕ್‌!

ಶಿವಸೇನೆ ಸದಸ್ಯರು ನಿರೀಕ್ಷಿಸಿದ್ದ ಕ್ಷೇತ್ರದಲ್ಲಿ ಬಿಜೆಪಿಗೆ ಟಿಕೆಟ್ ನೀಡಿದ್ದು ಮತ್ತು ಬಿಜೆಪಿ ನಿರೀಕ್ಷಿಸಿದ ಕ್ಷೇತ್ರದಲ್ಲಿ ಶಿವಸೇನೆಗೆ ಟಿಕೆಟ್ ಸಿಕ್ಕಿದ್ದು ಟಿಕೆಟ್ ಆಕಾಂಕ್ಷಿಗಳಲ್ಲಿ ಭಾರೀ ನಿರಾಸೆ ಉಂಟು ಮಾಡಿದೆ. ಈ ಕಾರಣದಿಂದ ಪಕ್ಷದ ವಿರುದ್ಧ ಬಂಡಾಯ ಎದ್ದು, ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾದ್ದ ಈ ನಾಲ್ವರು ನಾಯಕರನ್ನು ಬಿಜೆಪಿ ಉಚ್ಚಾಟಿಸಿದೆ.

ಅಷ್ಟೇ ಅಲ್ಲದೇ ಶಿವಸೇನೆಯಲ್ಲೂ ಸಹ ಅಸಮಾಧಾನ ಸ್ಫೋಟಗೊಂಡಿದೆ. ತಮ್ಮ ನಾಯಕನಿಗೆ ಟಿಕೆಟ್ ಸಿಗದ ಕಾರಣಕ್ಕೆ ಶಿವಸೇನೆಯ 26 ಕಾರ್ಪೋರೇಟರ್ ಗಳು ಮತ್ತು ನೂರಾರು ಕಾರ್ಯಕರ್ತರು ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ತನ್ನ ನಾಲ್ವರು ಬಂಡಾಯ ನಾಯಕರನ್ನು ಪಕ್ಷದಿಂದ ಅಮಾನತು ಮಾಡಿದೆ.

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಆದಿತ್ಯ ಠಾಕ್ರೆ?

ಮಹಾರಾಷ್ಟ್ರದ ಕಲ್ಯಾಣ್ ಪೂರ್ವ ಕ್ಷೇತ್ರದಿಂದ ಶಿವಸೇನೆ ನಾಯಕ ಧನಂಜಯ್ ಬಾಡೊರೆ ಅವರಿಗೆ ಟಿಕೆಟ್ ನೀಡದೇ, ಬಿಜೆಪಿ ಅಭ್ಯರ್ಥಿಯಾಗಿ ಗಣಪತ್ ಕಲು ಗಾಯಕ್ವಾಡ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಬೇಸತ್ತು ಶಿವಸೇನೆಯ 26 ಕಾರ್ಪೋರೇಟರ್ ಗಳು ಮತ್ತು 300 ಕಾರ್ಯಕರ್ತರು  ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ