
ಯವತ್ಮಾಲ್[ಫೆ.14]: ಎರಡನೇ ಪತ್ನಿ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದನ್ನು ಕಂಡು ಆಕ್ರೋಶಗೊಂಡ ಮೊದಲ ಪತ್ನಿ, ತನ್ನ ಪತಿ ಹಾಗೂ ಬಿಜೆಪಿ ಶಾಸಕ ರಾಜು ನಾರಾಯಣ್ ಮೇಲೆ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ನಡೆದಿದೆ.
ಅರ್ಣಿ ಕ್ಷೇತ್ರದ ಬಿಜೆಪಿ ಶಾಸಕ ರಾಜು ನಾರಾಯಣ್ ಅವರ 42ನೇ ಹುಟ್ಟುಹಬ್ಬವನ್ನು ಅವರ ಕೆಲ ಬೆಂಬಲಿಗರು ಮತ್ತು ಎರಡನೇ ಪತ್ನಿ ಪ್ರಿಯಾ ಆಚರಿಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಧಾವಿಸಿದ ಮೊದಲ ಪತ್ನಿ ಅರ್ಚನಾ ಹಾಗೂ ಅವರ ತಾಯಿ, ಏಕಾಏಕಿ ರಾಜು ಮತ್ತು ಪ್ರಿಯಾ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಕೆಲ ಸಾರ್ವಜನಿಕರೂ ಪ್ರಿಯಾ ಹಾಗೂ ರಾಜು ಮೇಲೆ ಹಲ್ಲೆ ನಡೆಸಿ ದ್ದಾರೆ.
ಇದರಿಂದ ಕಂಗಾಲಾದ ಪ್ರಿಯಾ, ಕೈಮುಗಿದು ಬಿಡುವಂತೆ ಕೋರಿಕೊಂಡಿದ್ದು, ಈ ಕುರಿತ ವಿಡಿಯೊವೊಂದು ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ