ಕರ್ನಾಟಕದ ಗಡಿಭಾಗದ ಮರಾಠರಿಗೂ ಮಹಾ ಮೀಸಲು?

Published : Mar 03, 2019, 01:14 PM IST
ಕರ್ನಾಟಕದ ಗಡಿಭಾಗದ  ಮರಾಠರಿಗೂ ಮಹಾ ಮೀಸಲು?

ಸಾರಾಂಶ

ಗಡಿ ವಿವಾದ ಕೆದಕಲು ಯತ್ನಿಸುತ್ತಿದೆ ಮಹಾ ಸರ್ಕಾರ | ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಕುರಿತು ದೇವೇಂದ್ರ ಫಡ್ನವೀಸ್ ಚರ್ಚೆ | ಕರ್ನಾಟಕ ಗಡಿಯಲ್ಲಿರುವ ಕನ್ನಡಿಗರಿಗೂ ’ಮಹಾ’ ಮೀಸಲಾತಿ ಬಗ್ಗೆ ಚರ್ಚೆ 

ಮುಂಬೈ (ಮಾ. 3):  ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ, ಮತ್ತೊಮ್ಮೆ ಕರ್ನಾಟಕ ಮತ್ತು ತನ್ನ ನಡುವಿನ ಗಡಿ ವಿವಾದವನ್ನು ಕೆದಕುವ ಯತ್ನ ಮಾಡಿದೆ. ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಕುರಿತು 2 ವರ್ಷಗಳ ಬಳಿಕ ಸಿಎಂ ದೇವೇಂದ್ರ ಫಡ್ನವೀಸ್‌ ಉನ್ನತ ಮಟ್ಟದ ಸಭೆ ನಡೆಸಿದರು.

ಈ ವೇಳೆ ವಿವಾದಿತ ಪ್ರದೇಶಗಳನ್ನು ತನ್ನ ವಶಕ್ಕೆ ಪಡೆಯುವ ಬಗ್ಗೆ ವಿವಿಧ ಕಾನೂನಿನ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿರುವ ಮರಾಠಿಗರಿಗೂ ಸಹ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.16ರಷ್ಟುಮೀಸಲಾತಿ ಕಲ್ಪಿಸುವ ಕುರಿತು  ಉನ್ನತಮಟ್ಟದ ಸಭೆಯಲ್ಲಿ ಚರ್ಚಿಸಲಾಗಿದೆ.

ಈ ಕುರಿತು ಪರಿಷತ್ತಿನ ವಿರೋಧ ಪಕ್ಷದ ನಾಯಕ ಧನಂಜಯ ಮುಂಡೆ ಮಾತನಾಡಿ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮನವಿಯಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಯಲ್ಲಿ 865 ಗ್ರಾಮಗಳಿದ್ದು ಇಲ್ಲಿನವರಿಗೂ ಮೀಸಲಾತಿ ಲಭಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಅಲ್ಲಿನ ಯುವಕರಿಗೆ ಮಹಾ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಸಭೆಯಲ್ಲಿ ಕಂದಾಯ ಸಚಿವ ಚಂದ್ರಕಾಂತ ಪಾಟೀಲ, ಕೈಗಾರಿಕಾ ಸಚಿವ ಸುಭಾಷ್‌ ದೇಸಾಯಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ