ಐವರು ಶಾಸಕರ ರಾಜೀನಾಮೆ : ಸಭೆ ಕರೆದ ಸಿಎಂ

Published : Jul 27, 2018, 12:21 PM IST
ಐವರು ಶಾಸಕರ ರಾಜೀನಾಮೆ : ಸಭೆ ಕರೆದ ಸಿಎಂ

ಸಾರಾಂಶ

ಐವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಮಾತುಕತೆಗಾಗಿ ಸಭೆ ಕರೆದಿದ್ದಾರೆ. ಮರಾಠ ಹೋರಾಟಕ್ಕೆ ಬೆಂಬಲ ಸೂಚಿಸಿ ಐವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

ಮುಂಬೈ :  ಮರಾಠ ಮೀಸಲಾತಿ ಹೋರಾಟಕ್ಕೆ ಬೆಂಬಲ ಸೂಚಿಸಿ ಐವರು ಶಾಸಕರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಪಕ್ಷದ ಮುಖಂಡರ ಸಭೆ ಕರೆದಿದ್ದಾರೆ.  

ಸಿಎಂ ಮಾತುಕತೆ ಸಿದ್ಧ ಎಂದು ಹೇಳಿದ ಬಳಿಕ ಮರಾಠ ಮೀಸಲಾತಿ ಹೋರಾಟಗಾರರು ಬಂದ್ ಕೈ ಬಿಟ್ಟು, ಬೇಡಿಕೆ ಈಡೇರದಿದ್ದಲ್ಲಿ ಮತ್ತೆ ಪ್ರತಿಭಟನೆ ಕೈ ಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅದಾದ ಬಳಿಕ ಮರಾಠ ಹೋರಾಟಕ್ಕೆ ಬೆಂಬಲ ಸೂಚಿಸಿ ಒಟ್ಟು 5 ಮಂದಿ ಶಾಸಕರು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

ಕಾಂಗ್ರೆಸ್ ಶಾಸಕ ಭರತ್ ಬಾಳ್ಕೆ ಹಾಗೂ ಬಿಜೆಪಿ ಶಾಸಕ ರಾಹುಲ್ ಅಹೆರ್ ಹಾಗೂ ಎನ್ ಸಿಪಿ ಶಾಸಕ ದತ್ತಾತ್ರೇಯಾ ಬಾರ್ನೆ ರಾಜೀನಾಮೆ ನೀಡಿದ್ದರು. ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ಪಕ್ಷದ ಮುಖಂಡರ ಸಭೆ ಕರೆದಿದ್ದು, ಈ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ. ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. 

ಮರಾಠರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲು ನೀಡಬೇಕು ಎಂದು ಆಗ್ರಹಿಸಿ ಬುಧವಾರ ಮರಾಠಾ ಕ್ರಾಂತಿ ಮೋರ್ಚಾ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳು ಕರೆ ನೀಡಿದ್ದ ‘ಮಹಾರಾಷ್ಟ್ರ ಬಂದ್’ ಹಿಂಸಾತ್ಮಕವಾಗಿ ಅಂತ್ಯಗೊಂಡಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!