
ಮುಂಬೈ : ಮಹಾರಾಷ್ಟ್ರದಲ್ಲಿ ರೈತನೋರ್ವ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಆತ್ಮಹತ್ಯಾ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ.
50 ವರ್ಷದ ಶಂಕ್ ಬೌರಾವ್ ಚಯರೆ ವಿಷ ಸೇವಿಸಿ ಬಳಿಕ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಅವರು ವಿಷ ಸೇವಿಸಿ ನೇಣು ಬಿಗಿದುಕೊಂಡಿದ್ದು, ಇದೇ ವೇಳೆ ಗಮನಿಸಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು.
ಒಟ್ಟು 2ಪುಟಗಳಷ್ಟು ಪತ್ರವನ್ನು ಬರೆದಿದ್ದು, ಅದರಲ್ಲಿ ತಾವು ಅತ್ಯಧಿಕ ಪ್ರಮಾಣದಲ್ಲಿ ಸಾಲ ಮಾಡಿಕೊಂಡಿದ್ದೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.
ಒಟ್ಟು 9 ಎಕರೆಯಲ್ಲಿ ಅವರು ಹತ್ತಿಯನ್ನು ಬೆಳೆದಿದ್ದು, ಸ್ಥಳೀಯ ಸಹಕಾರಿ ಸಂಘದಿಂದ 90 ಸಾವಿರ ಸಾಲವನ್ನು ಪಡೆದುಕೊಂಡಿದ್ದರು. ಖಾಸಗಿಯವರಿಂದ 3 ಲಕ್ಷ ಸಾಲವನ್ನು ಮಾಡಿದ್ದು, ಈ ಬಗ್ಗೆ ಯಾವ ರಾಜಕಾರಣಿಗಳ ಬಳಿ ನೆರವು ಕೇಳಿದರೂ ಕೂಡ ಯಾವು ತಮಗೆ ಸಹಾಯ ಮಾಡಿಲ್ಲ ಎಂದು ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.