ಹವಾಮಾನ ಇಲಾಖೆ ವಿರುದ್ಧ ಕೇಸ್ ದಾಖಲು

Published : Aug 09, 2018, 10:43 AM IST
ಹವಾಮಾನ ಇಲಾಖೆ ವಿರುದ್ಧ ಕೇಸ್ ದಾಖಲು

ಸಾರಾಂಶ

ಹವಾಮಾನ ಇಲಾಖೆ ವಿರುದ್ಧವೇ ರೈತರು ಪ್ರಕರಣ ದಾಖಲು ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಳೆಯ ಬಗ್ಗೆ ತಪ್ಪು ಮಾಹಿತಿ ನೀಡಿದೆ ಎಂದು ಪ್ರಕರಣ ದಾಖಲು ಮಾಡಲಾಗಿದೆ. 

ಮುಂಬೈ: ತಪ್ಪು ಮಳೆ ಮುನ್ಸೂಚನೆ ನೀಡಿದುದಕ್ಕಾಗಿ ಇಲ್ಲೊಂದು ರೈತರ ಗುಂಪು ಹವಾಮಾನ ಇಲಾಖೆಯ ವಿರುದ್ಧವೇ ದೂರು ದಾಖಲಿಸಿದೆ. ಪುಣೆ ಮತ್ತು ಮುಂಬೈಯ ಹವಾಮಾನ ಇಲಾಖೆ ಅಧಿಕಾರಿಗಳು ಬೀಜ ಮತ್ತು ಕ್ರಿಮಿನಾಶಕ ಉತ್ಪಾದಕರೊಂದಿಗೆ ಕೈಜೋಡಿಸಿ ತಪ್ಪು ಮಾಹಿತಿ ನೀಡಿದ್ದಾರೆ.

ಇದರಿಂದಾಗಿ ಮಳೆಯನ್ನೇ ನಂಬಿ ಬಿತ್ತನೆ ಮಾಡುವ ರೈತರಿಗೆ ಲಕ್ಷಾಂತರ ರು. ನಷ್ಟವಾಗಿದೆ ಎಂದು ಸಂಸದ ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಮರಾಠವಾಡ ಪ್ರಾಂತ್ಯದ ಅಧ್ಯಕ್ಷ ಮಾಣಿಕ್ ಕದಂ ಎಂಬವರು ನೀಡಿರುವ ದೂರಿನಲ್ಲಿ ಆಪಾದಿಸಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಕನ್ನಡಪ್ರಭ’ ಡ್ರಗ್ಸ್‌ ಅಭಿಯಾನ ವಿಧಾನಪರಿಷತ್ತಲ್ಲಿ ಪ್ರತಿಧ್ವನಿ
ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ