
ಮುಂಬೈ(ಫೆ.07): ಮಹತ್ವದ ಬೆಳವಣಿಗೆಯೊಂದರಲ್ಲಿ ಮದುವೆ ಸಂದರ್ಭದಲ್ಲಿ ಹೆಣ್ಣು ಕನ್ಯತ್ವ ಪರೀಕ್ಷೆಗೊಳಪಡುವ ಅಮಾನವೀಯ ಪದ್ದತಿಯನ್ನು ಮಹಾರಾಷ್ಟ್ರ ಸರ್ಕಾರ ನಿಷೇಧಿಸಲು ಮುಂದಾಗಿದೆ.
ಮಹಾರಾಷ್ಟ್ರದ ಕೆಲವು ಸಮುದಾಯಗಳಲ್ಲಿ ಇಂತದ್ದೊಂದು ಅನಿಷ್ಟ ಪದ್ದತಿ ರೂಢಿಯಲ್ಲಿದ್ದು, ಮದುವೆಗೂ ಮುನ್ನ ಹೆಣ್ಣು ತನ್ನ ಕನ್ಯತ್ವವನ್ನು ಸಾಬೀತುಪಡಿಸುವ ಅನಿವಾರ್ಯತೆಗೆ ದೂಡಲ್ಪಟ್ಟಿದ್ದಾಳೆ.
ಇದೀಗ ಈ ಅನಿಷ್ಟ ಪದ್ದತಿಯನ್ನು ನಿಷೇಧಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರ ಈ ಕುರಿತು ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ.
ಇತ್ತೀಚಿಗಷ್ಟೇ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ರಂಜಿತ್ ಪಾಟೀಲ್ ಅವರನ್ನು ಭೇಟಿ ಮಾಡಿದ್ದ ಮಹಾರಾಷ್ಟ್ರದ ಸಾಮಾಜಿಕ ಹೋರಾಟಗಾರರ ನಿಯೋಗ, ಕನ್ಯತ್ವ ಪರೀಕ್ಷೆಯಂತ ದುಷ್ಟ ಪದ್ದತಿಗೆ ಕಡಿವಾಣ ಹಾಕಬೇಕು ಎಂದು ಒತ್ತಯಿಸಿದ್ದವು.
ಅದರಂತೆ ಇದೀಗ ಕನ್ಯತ್ವ ಪರೀಕ್ಷೆ ವಿರುದ್ಧ ಕಠಿಣ ಕಾನೂನು ಜಾರಿಗೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಈ ಅನಿಷ್ಟ ಪದ್ದತಿ ತೊಲಗಿಸುವ ಭರವಸೆ ನೀಡಿದೆ.
ಕನ್ಯತ್ವ ಪ್ರೂವ್ ಮಾಡ್ಲಿಕ್ಕೂ ಬಂದಿದೆ ಮಾತ್ರೆ!
ಕನ್ಯತ್ವ ಸೀಲ್ಡ್ ಬಾಟಲ್ ಎಂದ ಪ್ರೊಫೆಸರ್ ಕತೆ ಏನಾಯ್ತು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.