
ಮುಂಬೈ[ಸೆ.10]: ಹಿರಿಯ ಪೊಲೀಸ್ ಅಧಿಕಾರಿ ಹಾಗೂ ನೂರಕ್ಕೂ ಹೆಚ್ಚು ಎನ್ಕೌಂಟರ್ ಮಾಡಿ ಮುಂಬೈ ಭೂಗತ ಜಗತ್ತಿಗೆ ನಡುಕ ಹುಟ್ಟಿಸಿದ್ದ ಪ್ರದೀಪ್ ಶರ್ಮಾ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಸರ್ಕಾರ ಕೂಡಾ ಅಂಗೀಕರಿಸಿದೆ.
ಶರ್ಮಾ, ಇದೇ ಅಕ್ಟೋಬರ್ನಲ್ಲಿ ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. 2008ರ ಲಖನ್ ಭಯ್ಯಾ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸೇವೆಯಿಂದ ಅಮಾನತ್ತಾಗಿದ್ದ ಪ್ರದೀಪ್ ಕುಮಾರ್ 2013ರಲ್ಲಿ ಸೇವೆಗೆ ಮರಳಿದ್ದರು.
1983ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದ ಪ್ರದೀಪ್ ಬಳಿಕ ಮುಂಬೈ ಕ್ರೈಂ ಬ್ರಾಂಚ್ಗೆ ವರ್ಗವಾಗಿದ್ದರು. ಮುಂಬೈ ಭೂಗತ ಜಗತ್ತನ್ನು ಮಟ್ಟಹಾಕುವ ನೇತೃತ್ವ ವಹಿಸಿದ್ದ ಶರ್ಮಾ, ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ನನ್ನು ಸುಲಿಗೆ ಪ್ರಕರಣವೊಂದರಲ್ಲಿ ಬಂಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.