ಆರೋಪಿ ಹೆಸರು ಪದ್ಮಶ್ರೀಗೆ ಶಿಫಾರಸು ಮಾಡಿದ್ದ ಮಹಾರಾಷ್ಟ್ರ

Published : Mar 03, 2018, 08:31 AM ISTUpdated : Apr 11, 2018, 01:04 PM IST
ಆರೋಪಿ ಹೆಸರು ಪದ್ಮಶ್ರೀಗೆ ಶಿಫಾರಸು ಮಾಡಿದ್ದ ಮಹಾರಾಷ್ಟ್ರ

ಸಾರಾಂಶ

ಜ.1ರಂದು ನಡೆದ ಭೀಮಾ- ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಬಲಪಂಥೀಯ ಮುಖಂಡ ಮನೋಹರ್‌ ಅಲಿಯಾಸ್‌ ಸಂಭಾಜಿ ಭೀಡೆ ಅವರನ್ನು ಮಹಾರಾಷ್ಟ್ರದ ಬಿಜೆಪಿ ಸರ್ಕಾರ 2016ರಲ್ಲಿ ಪದ್ಮ ಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಮುಂಬೈ: ಜ.1ರಂದು ನಡೆದ ಭೀಮಾ- ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಬಲಪಂಥೀಯ ಮುಖಂಡ ಮನೋಹರ್‌ ಅಲಿಯಾಸ್‌ ಸಂಭಾಜಿ ಭೀಡೆ ಅವರನ್ನು ಮಹಾರಾಷ್ಟ್ರದ ಬಿಜೆಪಿ ಸರ್ಕಾರ 2016ರಲ್ಲಿ ಪದ್ಮ ಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.

10 ಹಿರಿಯ ಸಚಿವರನ್ನು ಒಳಗೊಂಡ ಉನ್ನತಾಧಿಕಾರ ಸಮಿತಿ ಪದ್ಮ ಶ್ರೀ ಪ್ರಶಸ್ತಿಗೆ ಭೀಡೆ ಹೆಸರನ್ನು ಶಿಫಾರಸು ಮಾಡಿತ್ತು. ಈ ಸಂಬಂಧ ಸರ್ಕಾರ ಯಾವುದೇ ಅರ್ಜಿಯನ್ನು ಸ್ವೀಕರಿಸದೇ ಇದ್ದರೂ ಸಮಿತಿ ತನ್ನ ವಿವೇಚನೆಯ ಮೇರೆಗೆ ಶಿಫಾರಸು ಮಾಡಿತ್ತು. ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಸಲ್ಲಿಸಿದ ಅರ್ಜಿಯಿಂದ ಈ ಮಾಹಿತಿ ಲಭ್ಯವಾಗಿದೆ.

ವಸತಿ ಸಚಿವ ಪ್ರಕಾಶ್‌ ಮೆಹ್ತಾ ನೇತೃತ್ವದ ಸಮಿತಿ ಇತರ 15 ಹೆಸರುಗಳ ಜೊತೆಗೆ ಭೀಡೆ ಹೆಸರನ್ನು ಶಿಫಾರಸು ಮಾಡಿತ್ತು. ಈ ಶಿಫಾರಸನ್ನು 2015ರ ಅ.12ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದೇ ವೇಳೆ ಬಿ.ಆರ್‌. ಅಂಬೇಡ್ಕರ್‌ ಅವರ ಮೊಮ್ಮಗ ಹಾಗೂ ದಲಿತ ಮುಖಂಡ ಪ್ರಕಾಶ್‌ ಅಂಬೇಡ್ಕರ್‌ ಸರ್ಕಾರದ ತೀರ್ಮಾನ ‘ಬೌದ್ಧಿಕ ದೀವಾಳಿತನ’ ಎಂದು ಟೀಕಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!