
ಮುಂಬೈ : ದಿನ ದಿನಕ್ಕೆ ತೈಲ ದರ ಗಗನದತ್ತ ಮುಖ ಮಾಡುತ್ತಿದೆ. ಪ್ರತೀ ಲೀಟರ್ ಪೆಟ್ರೋಲ್ ದರ 80 ರು. ದಾಟಿ ಮುಂದೆ ಹೋಗಿದೆ. ಜನರಿಗೆ ಪೆಟ್ರೋಲ್ ದರ ಹೆದರಿಕೆಯನ್ನು ಹುಟ್ಟಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ.
ಜನರಿಗೆ ಕೊಂಚ ನಿರಾಳರಾಗುವಂತಹ ಸುದ್ದಿಯೊಂದನ್ನು ನೀಡಿದ್ದು, ಪೆಟ್ರೋಲ್ ದರವನ್ನು ಇಳಿಕೆ ಮಾಡಲು ಹಲವು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಹೇಳಿದ್ದಾರೆ.
ಇನ್ನು ಪೆಟ್ರೋಲ್ ದರ ಇಳಿಕೆ ಮಾಡಲು ಜಿಎಸ್ ಟಿ ಅಡಿ ತರುವುದು ಕೂಡ ಒಂದು ನಿಯಂತ್ರಣ ವಿಧಾನವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ವಿವಿಧ ರೀತಿಯ ಪ್ರಸ್ತಾವನೆಯನ್ನು ಮುಂದಿಡಲಾಗುತ್ತದೆ. ಪೆಟ್ರೋಲ್ , ಡೀಸೆಲ್ ಅನ್ನು ಜಿಎಸ್ ಟಿ ಅಡಿಯಲ್ಲಿ ತರಲು ಮಹಾರಾಷ್ಟ್ರ ಸರ್ಕಾರ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಫಡ್ನಾವಿಸ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.