ಬೆಳಗಾವಿ ಗಡಿ ವಿವಾದ: ಮೋದಿ ಮಧ್ಯಪ್ರವೇಶಕ್ಕೆ ಮಹಾರಾಷ್ಟ್ರ ಪಟ್ಟು

Kannadaprabha News   | Asianet News
Published : Aug 12, 2021, 07:28 AM IST
ಬೆಳಗಾವಿ ಗಡಿ ವಿವಾದ: ಮೋದಿ ಮಧ್ಯಪ್ರವೇಶಕ್ಕೆ ಮಹಾರಾಷ್ಟ್ರ ಪಟ್ಟು

ಸಾರಾಂಶ

* ಕರ್ನಾಟಕದಲ್ಲಿನ ಮರಾಠಿ ಭಾಷಿಕ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿಸಿ * ಮರಾಠಿ ಭಾಷಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಿರಿ * 6 ದಶಕಗಳ ಹಳೆಯ ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡಿ  

ಮುಂಬೈ(ಆ.12): ಕರ್ನಾಟಕದೊಂದಿಗೆ ದಶಕಗಳ ಹಳೆಯ ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಮನವಿ ಮಾಡಿದ್ದಾರೆ.

ಈ ಕುರಿತು ಆ.9ರಂದು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಪವಾರ್‌ ‘ಮುಂಬೈಯನ್ನು ರಾಜಧಾನಿಯಾಗಿಸಿ ಮಹಾರಾಷ್ಟ್ರ ರಾಜ್ಯ ರಚನೆಯಾಗಿ 60ಕ್ಕಿಂತ ಹೆಚ್ಚಿನ ವರ್ಷಗಳೇ ಕಳೆದರೂ ಕರ್ನಾಟಕದಲ್ಲಿನ ಮರಾಠಿ ಭಾಷಿಕ ಪ್ರದೇಶಗಳಾದ ಬೆಳಗಾವಿ, ಕಾರವಾರ, ಬೀದರ್‌, ಭಾಲ್ಕಿ, ನಿಪ್ಪಾಣಿ ಮತ್ತು ಇತರೆ ಹಲವು ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿಸಿಲ್ಲ. ಇಷ್ಟು ವರ್ಷಗಳಾದರೂ ಸಮಸ್ಯೆ ಇನ್ನೂ ಬಗೆ ಹರಿಯದೇ ಇರುವುದಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿನ ಮರಾಠಿ ಭಾಷಿಕ ಪ್ರದೇಶಗಳ ಜನರಿಗೆ ವಿಷಾದವಿದೆ. ಈ ಎಲ್ಲಾ ಭಾಗಗಳನ್ನು ಒಳಗೊಂಡ ಸಂಯುಕ್ತ ಮಹಾರಾಷ್ಟ್ರ ರಚನೆಯ ಕನಸು ನನಸಾಗುವವರೆಗೂ ಮಹಾರಾಷ್ಟ್ರ ವಿರಮಿಸುವುದಿಲ್ಲ. ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ಮುಂದುವರೆಯುವುದಾದರೂ, ಈ ವಿಷಯ ಸಂಬಂಧ ನೀವು ಮಹಾರಾಷ್ಟ್ರದ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ನ್ಯಾಯಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರುತ್ತೇವೆ’ ಎಂದಿದ್ದಾರೆ.

ಬೆಳಗಾವಿ, ಕಾರವಾರ ನಮ್ದು: ಬೆಂಕಿಗೆ ಮಹಾ ಡಿಸಿಎಂ ತುಪ್ಪ!

‘ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರಕ್ಕೆ ನ್ಯಾಯ ಸಿಗಲಿದೆ ಎಂಬ ಭರವಸೆ ಇದೆ. ಆದರೂ ನಾವು ಈ ಹಂತದಲ್ಲಿ ನಿಮ್ಮ ಕರ್ನಾಟಕದಲ್ಲಿನ ಮರಾಠಿ ಭಾಷಿಕರಿಗೆ ನ್ಯಾಯ ದೊರಕಿಸಲು ನಿಮ್ಮ ನೆರವನ್ನು ಕೋರುತ್ತೇವೆ. ನೀವು ಈ ವಿಷಯದಲ್ಲಿ ನಮ್ಮ ಆಶಯ ನೆರವೇರಿಸುತ್ತೀರಿ ಎಂಬ ನಂಬಿಕೆಯೂ ಇದೆ’ ಎಂದು ಹೇಳಿದ್ದಾರೆ. ಜೊತೆಗೆ ‘ಮಹಾರಾಷ್ಟ್ರಕ್ಕೆ ಸೇರಿದ ವಿವಾದಿತ ಪ್ರದೇಶ ಮತ್ತು ಇತರೆ ಮರಾಠಿ ಭಾಷಿಕ ಪ್ರದೇಶಗಳಲ್ಲಿ ಮರಾಠಿ ಭಾಷಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು’ ಎಂದೂ ಪವಾರ್‌ ಮನವಿ ಮಾಡಿಕೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?