ತಮಾಷೆಯಲ್ಲ... ನೆರೆ ಪರಿಶೀಲನೆ ವೇಳೆ ನಗುತ್ತಾ ಸೆಲ್ಫಿ ತೆಗಿಸಿಕೊಂಡ ಮಹಾ ಸಚಿವ| ವಿಡಿಯೋ ವೈರಲ್
ಮುಂಬೈ[ಆ.10]: ರಾಜಕಾರಣಿಗಳು ಜನರ ಮುಂದೆ ಭಾಷಣ ಬಿಗಿದು, ಕೈ ಬೀಸಿ ಮತಕೇಳುವುದು ರೂಢಿಗತ. ಹಾಗೆಂದು ಪ್ರವಾಹದಿಂದ ನಲುಗಿ ದುಃಖದಿಂದ ಇರುವ ಜನರ ಬಳಿ ಹೋಗಿ ನಗು ಬೀರುತ್ತಾ, ಕೈ ಬೀಸಿದರೆ ಯಾರಿಗೆ ತಾನೆ ಇಷ್ಟವಾಗುತ್ತದೆ?
ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಇಂಥದ್ದೊಂದು ಎಡವಟ್ಟು ಮಾಡಿಕೊಂಡು ಪೇಚಿಗೆ ಸಿಲುಕಿದ್ದಾರೆ. ಪ್ರವಾಹ ಪೀಡಿತ ಕೊಲ್ಲಾಪುರಕ್ಕೆ ತೆರಳಿದ್ದ ಅವರು ದೋಣಿಯಲ್ಲಿ ವಿಹಾರ ಮಾಡುತ್ತಾ ಅಪರಿಚಿತ ವ್ಯಕ್ತಿಯೊಬ್ಬನ ಜೊತೆ ಹಲ್ಲು ಕಿರಿಯುತ್ತಾ ಸೆಲ್ಫಿ ವಿಡಿಯೋ ಮಾಡಿದ್ದಾರೆ.
सत्ताधाऱ्यांनी असंवेदनशीलतेचा कळस गाठलाय! 'त्या' लेकराच्या मृतदेहाचे चित्र आठवले तर मनाला चटका लागून डोळ्यात टचकन पाणी येतं. मंत्री महोदय मात्र सेल्फीत मग्न आहेत. लाज कशी वाटतं नाही? या असंवेदनशील वागण्याची दखल घेणार का? pic.twitter.com/1tDxo91gJg
— Dhananjay Munde (@dhananjay_munde)महापूर पाहणीवेळी मंत्री आणि अधिकाऱ्यांच्या चेहऱ्यावर हसू, सेल्फीसाठी पोझ. पुराची पाहणी करण्यासाठी गेले आहेत की पर्यटनासाठी? सत्ताधाऱ्यांना काही संवेदना उरल्या आहेत की नाही? जी, या असंवेदनशील मंत्र्यांचा तात्काळ राजीनामा घ्या,अधिकाऱ्यांचे निलंबन करा. pic.twitter.com/7wM0a2bE5m
— Dhananjay Munde (@dhananjay_munde)ಸಚಿವರ ಈ ವರ್ತನೆ ವಿವಾದಕ್ಕೆ ಕಾರಣವಾಗಿದೆ. ಸಚಿವರು ನೆರೆ ಪರಿಶೀಲನೆಗೆ ತೆರಳಿದ್ದಾರೆಯೇ ಅಥವಾ ಪ್ರವಾಸಕ್ಕೆ ಹೋಗಿದ್ದಾರೆಯೇ ಎಂದು ಎನ್ಸಿಪಿ ಪ್ರಶ್ನಿಸಿದೆ. ಅಲ್ಲದೇ ಸಚಿವರ ರಾಜೀನಾಮೆಗೂ ಒತ್ತಾಯಿಸಿದೆ.