ಮಹಾರಾಷ್ಟ್ರದಲ್ಲಿ ನೆರೆ ಸ್ಥಿತಿ; ಮುನ್ಸೂಚನೆ ಇಲ್ಲದೇ ಡ್ಯಾಂನಿಂದ ಬಿಟ್ಟ ನೀರಿಗೆ ಕರ್ನಾಟಕದ ರೈತರಿಗೆ ಹಾನಿ

Published : Sep 23, 2016, 04:36 AM ISTUpdated : Apr 11, 2018, 12:44 PM IST
ಮಹಾರಾಷ್ಟ್ರದಲ್ಲಿ ನೆರೆ ಸ್ಥಿತಿ; ಮುನ್ಸೂಚನೆ ಇಲ್ಲದೇ ಡ್ಯಾಂನಿಂದ ಬಿಟ್ಟ ನೀರಿಗೆ ಕರ್ನಾಟಕದ ರೈತರಿಗೆ ಹಾನಿ

ಸಾರಾಂಶ

ಬೆಳಗಾವಿ(ಸೆ. 23): ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯಿನಾ ಹಾಗೂ ಕೊಲ್ಹಾಪುರ ಜಿಲ್ಲೆಯ ರಾಜಾಪೂರ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. 50 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ಜಿಲ್ಲಾಡಳಿತ ಹಾಗೂ ಕರ್ನಾಟಕ ಸರ್ಕಾರದ ಗಮನಕ್ಕೆ ತಾರದೇ ಏಕಾಏಕಿ ನೀರು ಬಿಡಗಡೆ ಮಾಡುತ್ತಿರುವ ಕಾರಣದಿಂದ 50ಕ್ಕೂ ಹೆಚ್ಚು ರೈತರ ಪಂಪಸೆಟ್'ಗಳು ನದಿ ನೀರಲ್ಲಿ ಕೊಚ್ಚಿ ಹೋಗಿವೆ. ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಕ್ಕೆ ಬಿಡಲಾಗುತ್ತಿದೆ. ಮಹಾರಾಷ್ಟ್ರ ಯಾವುದೇ ಮುನ್ಸೂಚನೆ ನೀಡದೆ ನೀರು ಬಿಟ್ಟಿರುವುದು ಇಲ್ಲಿನ ರೈತ ಆಕ್ರೋಶಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ರಾಂಗ್‌ ಫ್ಲೈಟ್‌ ಹತ್ತಿದ್ದಾರೆ: ಸಿದ್ಧರಾಮಯ್ಯ ವಿರುದ್ಧ ಆರ್‌.ಅಶೋಕ್‌ ಗರಂ!
ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!