ಮುಳುಗಲಿವೆ ಈ ನಗರಗಳು : ಎಚ್ಚರ..!

Published : Aug 27, 2018, 03:04 PM ISTUpdated : Sep 09, 2018, 09:49 PM IST
ಮುಳುಗಲಿವೆ ಈ ನಗರಗಳು : ಎಚ್ಚರ..!

ಸಾರಾಂಶ

ಕೇರಳದಲ್ಲಿ ಭಾರೀ ಮಳೆ ಸುರಿದು  ಉಂಟಾದ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದೇ ರೀತಿ ದುಸ್ಥಿತಿ ಈ ನಗರಗಳಿಗೂ ಎದುರಾಗಬಹುದು ಎನ್ನುವ ಎಚ್ಚರಿಕೆ ನೀಡಲಾಗಿದೆ. 

ಮುಂಬೈ :  ಕೇರಳದಲ್ಲಿ ಈ ಬಾರೀ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ಮಹಾರಾಷ್ಟ್ರಕ್ಕೂ ಕೂಡ ಇದೇ ರೀತಿಯಾದ ಆತಂಕ ಎದುರಾಗಬಹುದಾಗಿದೆ. ಮಹಾರಾಷ್ಟ್ರದ ಅನೇಕ ನಗರಗಳೂ ಕೂಡ ಮುಳುಗುವ ಸ್ಥಿತಿಯಲ್ಲಿವೆ. ಒಂದು  ವೇಳೆ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದಲ್ಲಿ ಇಲ್ಲಿರುವ ಡ್ಯಾಂಗಳು ಅಪಾಯಕರ ಸ್ಥಿತಿಯಲ್ಲಿದ್ದು ಯಾವುದೇ ಸಂದರ್ಭದಲ್ಲಿ ಸಮಸ್ಯೆ ಎದುರಾಗಬಹುದು. 

ಒಂದು ವೇಳೆ ಮತ್ತೆ ಮಳೆಯಾದರೆ  2005ರಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಸ್ಥಿತಿ ಮತ್ತೆ ತಲೆದೋರುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಒಟ್ಟು 3264 ಡ್ಯಾಂಗಳಿದ್ದು ಮಳೆಯಾದರೆ ಮುಂಬೈ, ಥಾಣೆ, ನಂದೇಡ್ ನಗರಗಳು ಹೆಚ್ಚಿನ ಅಪಾಯವನ್ನು ಎದುರಿಸಲಿವೆ. 

ಇಲ್ಲಿ ಪ್ರವಾಹವನ್ನು ಎದುರಿಸಲು ಯಾವುದೇ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳದ ಕಾರಣ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ನಿರಂತರವಾಗಿ ಮಳೆ ಸುರಿದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದಕ್ಕೆಲ್ಲಾ ಮನುಷ್ಯರೇ ಕಾರಣವಾಗಿರುತ್ತಾರೆ ಎಂದು ತಜ್ಞರ ಅಭಿಪ್ರಾಯವಾಗಿದೆ. 

ಮಳೆಯನ್ನು ಎದುರಿಸಲು ಸೂಕ್ತ ಕ್ರಮ ಕೈಗೊಳ್ಳದೇ ಇರುವುದು. ಚರಂಡಿ ವ್ಯವಸ್ಥೆ ಸೂಕ್ತವಾಗಿಲ್ಲದೇ ಇರುವುದು. ತೆರೆದ ಪ್ರದೇಶಗಳಿರುವುದು ನೀರಿನಿಂದ ನಗರಗಳು ಮುಳುಗಲು ಕಾರಣವಾಗುತ್ತದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಗುಲಗಳಿಗೆ ಸಬ್ಸಿಡಿ ದರದಲ್ಲಿ ಟಿಟಿಡಿ ಮೈಕ್‌, ವಿಗ್ರಹ
ಎಪ್ಸ್ಟೀನ್‌ ಸೆ* ಫೈಲ್‌ಗಳಲ್ಲಿ ಕ್ಲಿಂಟನ್‌, ಜಾಕ್ಸನ್‌ ಫೋಟೋ