
ನವದೆಹಲಿ(ಜ.9): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹತ್ಯೆ ಹಿಂದೆ ನಾಥೂರಾಂ ಗೋಡ್ಸೆ ಹೊರತಾಗಿ ಮತ್ತೊಬ್ಬ ವ್ಯಕ್ತಿ ಇದ್ದ ಎಂಬುದಕ್ಕೆ ಯಾವುದೇ ಸಾಕ್ಷ್ಯ ಲಭಿಸಿಲ್ಲ. ಹೀಗಾಗಿ ಗಾಂಧಿ ಹತ್ಯೆ ಪ್ರಕರಣ ವನ್ನು ಮತ್ತೊಮ್ಮೆ ತನಿಖೆ ನಡೆಸಬೇಕಾದ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟಿಗೆ ನ್ಯಾಯಾಲಯದ ಸಲಹೆಗಾರ (ಅಮೀಕಸ್ ಕ್ಯೂರಿ) ಅಮರೇಂದ್ರ ಶರಣ್ ಸೋಮವಾರ ಸಲಹೆ ತಿಳಿಸಿದ್ದಾರೆ.
ಇದರಿಂದಾಗಿ, ‘ಗಾಂಧಿ ಹತ್ಯೆ ಹಿಂದೆ ನಿಗೂಢ ವ್ಯಕ್ತಿಯೊಬ್ಬರು ಇದ್ದರು, ಆ ಬಗ್ಗೆ ತನಿಖೆ ನಡೆಸಬೇಕು’ ಎಂಬ ಬೇಡಿಕೆ ಬಲ ಕಳೆದುಕೊಂಡಿದೆ. ಸಂಶೋಧಕ ಪಂಕಜ್ ಫಡ್ನಿಸ್ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.