
ಬೆಂಗಳೂರು(ನ.15): ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ಪುತ್ರ ಕಾರ್ತಿಕ್ಗೌಡ ವಿರುದ್ಧ ನಟಿ ಮೈತ್ರೇಯಾ ಗೌಡ ಅವರು ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕಾರ್ತಿಕ್ಗೌಡ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮೈತ್ರೇಯಾ ಗೌಡ ಇದೀಗ ಪೊಲೀಸರು ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಅತ್ಯಾಚಾರ ಆರೋಪವನ್ನೇ ಕೈಬಿಟ್ಟಿದ್ದಾರೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಕಾರ್ತಿಕ್ಗೌಡ ನಮ್ಮೊಂದಿಗೆ ಸಂಪರ್ಕ ಹೊಂದಿದ್ದು, ಅವರ ಪೋಷಕರಿಗೆ ಗೊತ್ತಿತ್ತು. ಆದರೂ, ಅವರ ಪೋಷಕರು ಬೇರೆ ಯುವತಿಯೊಂದಿಗೆ ಮಗನ ವಿವಾಹ ಏರ್ಪಡಿಸಿದ್ದರು. ಹಾಗಾಗಿ ಪ್ರಕರಣದಲ್ಲಿ ಕಾರ್ತಿಕ್ಗೌಡ ತಂದೆ ಡಿ.ವಿ. ಸದಾನಂದಗೌಡ ಹಾಗೂ ತಾಯಿ ಡಾಟಿ ಅವರನ್ನು ಆರೋಪಿಗಳನ್ನಾಗಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.