ಡಿವಿಎಸ್ ಪುತ್ರನ ವಿರುದ್ಧದ ಪ್ರಕರಣ ರದ್ದು; ಸುಪ್ರೀಂಗೆ ಹೋಗುತ್ತೇನೆಂದ ಮೈತ್ರಿಯಾ ಗೌಡ

Published : Dec 16, 2016, 07:12 AM ISTUpdated : Apr 11, 2018, 01:07 PM IST
ಡಿವಿಎಸ್ ಪುತ್ರನ ವಿರುದ್ಧದ ಪ್ರಕರಣ ರದ್ದು; ಸುಪ್ರೀಂಗೆ ಹೋಗುತ್ತೇನೆಂದ ಮೈತ್ರಿಯಾ ಗೌಡ

ಸಾರಾಂಶ

ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮೈತ್ರಿಯಾ ಗೌಡ ಅವರು ಸುಪ್ರೀಂಕೋರ್ಟ್'ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು(ಡಿ. 16): ಡಿವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡಗೆ ಬಿಗ್ ರಿಲೀಫ್ ಸಿಕ್ಕಿದೆ. ಕಾರ್ತಿಕ್ ಗೌಡ ವಿರುದ್ಧ ನಟಿ ಮೈತ್ರಿಯಾ ಗೌಡ ದಾಖಲಿಸಿದ್ದ ವಂಚನೆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇಂದು ತೀರ್ಪು ಹೊರಡಿಸಿದ ಉಚ್ಚ ನ್ಯಾಯಾಲಯ, ಕಾರ್ತಿಕ್ ಗೌಡ ವಿರುದ್ಧ ಸಿಐಡಿ ದಾಖಲಿಸಿದ್ದ ಚಾರ್ಜ್'ಶೀಟನ್ನು ರದ್ದುಗೊಳಿಸಿತು. ಮೈತ್ರಿಯಾ ಗೌಡ ಆರೋಪಕ್ಕೆ ಪೂರಕವಾಗಿ ಸರಿಯಾದ ಸಾಕ್ಷ್ಯಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ದೈಹಿಕವಾಗಿ ಬಳಸಿಕೊಂಡರು, ಹಾಗೂ ಅತ್ಯಾಚಾರ ಎಸಗಿದರು ಎಂದು ಕಾರ್ತಿಕ್ ಗೌಡ ವಿರುದ್ಧ ಮೈತ್ರಿಯಾ ಗೌಡ ಆರೋಪಿಸಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಕಾರ್ತಿಕ್ ಗೌಡ ವಿರುದ್ಧ ಕೋರ್ಟ್'ನಲ್ಲಿ ಆರೋಪಪಟ್ಟಿ ದಾಖಲಿಸಿದ್ದರು.

ಸುಪ್ರೀಂನಲ್ಲಿ ಮೈತ್ರಿಯಾ ಮೇಲ್ಮನವಿ:
ಇದೇ ವೇಳೆ, ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮೈತ್ರಿಯಾ ಗೌಡ ಅವರು ಸುಪ್ರೀಂಕೋರ್ಟ್'ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್