
ಇಡುಕ್ಕಿ: ಕೇರಳದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಮಕರವಿಳಕ್ಕು ಉತ್ಸವ ಇಂದು ಸಂಭವಿಸಲಿದೆ. ಈ ಮಹಾ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲು ದೇಶಾದ್ಯಂತದಿಂದ ಈಗಾಗಲೇ ಲಕ್ಷಾಂತರ ಅಯ್ಯಪ್ಪ ಭಕ್ತರು ಶಬರಿಮಲೆಗೆ ಧಾವಿಸಿದ್ದಾರೆ. ಲಕ್ಷಾಂತರ ಜನರ ಭಾಗವಹಿಸುವಿಕೆಯಿಂದ ನಡೆಯುವ ವಾರ್ಷಿಕ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಬೇಕಾದ ಎಲ್ಲ ಕ್ರಮಗಳನ್ನು ಕೇರಳ ಸರ್ಕಾರ ಈಗಾಗಲೇ ಕೈಗೊಂಡಿದೆ.
ಎರ್ನಾಕುಲಂ ವಲಯ ಐಜಿ, ಇಡುಕ್ಕಿ ಎಸ್ಪಿ ಮತ್ತು ಡಿವೈಎಸ್ಪಿಗಳು ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದು, ಜಿಲ್ಲಾಡಳಿತವೂ ಎಲ್ಲ ಸಹಕಾರ ನೀಡುತ್ತಿದೆ. ಪ್ರತಿ ವರ್ಷ ಮಕರ ಸಂಕ್ರಮಣದ ದಿನ ಶಬರಿಮಲೆ ಅಯ್ಯಪ್ಪ ಸನ್ನಿದಾನದಲ್ಲಿ ಮಕರ ಜ್ಯೋತಿ ಸಂಭವಿಸುತ್ತಿದ್ದು, ಅಪಾರ ಸಂಖ್ಯೆಯ ಭಕ್ತರು ಇದನ್ನು ವೀಕ್ಷಿಸುವುದಕ್ಕಾಗಿಯೇ ತಿಂಗಳುಗಟ್ಟಲೆ ಶ್ರದ್ಧಾಭಕ್ತಿಯ ವ್ರತ ಮಾಡಿ, ದೇವಳಕ್ಕೆ ಭೇಟಿ ನೀಡುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.