ತ್ರಿಭಾಷಾ ಸೂತ್ರ ಒಪ್ಪುವ ಟ್ವೀಟ್‌ ಮಾಡಿ ತ.ನಾಡು ಸಿಎಂ ಎಡವಟ್ಟು!

Published : Jun 06, 2019, 07:19 AM IST
ತ್ರಿಭಾಷಾ ಸೂತ್ರ ಒಪ್ಪುವ ಟ್ವೀಟ್‌ ಮಾಡಿ ತ.ನಾಡು ಸಿಎಂ ಎಡವಟ್ಟು!

ಸಾರಾಂಶ

ತ್ರಿಭಾಷಾ ಸೂತ್ರ ಒಪ್ಪುವ ಟ್ವೀಟ್‌ ಮಾಡಿ ತ.ನಾಡು ಸಿಎಂ ಎಡವಟ್ಟು| ದೇಶಾದ್ಯಂತ ತಮಿಳು 3ನೇ ಭಾಷೆ ಮಾಡಿ ಎಂದ ಪಳನಿಸ್ವಾಮಿ| ವಿರೋಧ ಬರುತ್ತಿದ್ದಂತೆ ಕೆಲವೇ ತಾಸಿನಲ್ಲಿ ಟ್ವೀಟ್‌ ಡಿಲೀಟ್‌

ಚೆನ್ನೈ[ಮೇ.07]: ತ್ರಿಭಾಷಾ ಸೂತ್ರದಡಿ ಹಿಂದಿ ಹೇರಿಕೆ ಯತ್ನ ನಡೆಯುತ್ತಿದೆ ಎಂಬ ವಿವಾದ ತಣ್ಣಗಾದ ಬೆನ್ನಲ್ಲೇ, ಹಿಂದಿಯನ್ನು ದೇಶಾದ್ಯಂತ ತೃತೀಯ ಭಾಷೆಯಾಗಿ ಸೇರ್ಪಡೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್‌ ಮಾಡುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಭಾರಿ ವಿವಾದಕ್ಕೆ ಸಿಲುಕಿದ್ದಾರೆ.

ತ್ರಿಭಾಷಾ ಸೂತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೂ ಮುಖ್ಯಮಂತ್ರಿಗಳು ತ್ರಿಭಾಷಾ ಸೂತ್ರದ ಪರವೇ ಒಲವು ತೋರಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಇದು ತೀವ್ರಗೊಳ್ಳುತ್ತಿದ್ದಂತೆ, ಪಳನಿಸ್ವಾಮಿ ಅವರು ತಮ್ಮ ವಿವಾದಿತ ಟ್ವೀಟ್‌ ಅನ್ನೇ ಡಿಲೀಟ್‌ ಮಾಡಿ ಪಾರಾಗಲು ಯತ್ನಿಸಿದ್ದಾರೆ.

ದೇಶದ ಬೇರೆ ರಾಜ್ಯಗಳಲ್ಲಿ ತಮಿಳನ್ನು ಮೂರನೇ ಭಾಷೆಯಾಗಿ ಕಲಿಯುವ ಅವಕಾಶ ನೀಡಬೇಕು ಎಂದು ಪಳನಿಸ್ವಾಮಿ ಬುಧವಾರ ಬೆಳಗ್ಗೆ ಮೋದಿ ಅವರಿಗೆ ಟ್ವೀಟ್‌ ಮಾಡಿದರು. ಆದರೆ ತಮಿಳುನಾಡಿನಲ್ಲಿ ಸದ್ಯ ಇಲ್ಲದ ತ್ರಿಭಾಷೆಯನ್ನು ಜಾರಿಗೆ ತರಲು ಪಳನಿಸ್ವಾಮಿ ಹೊರಟಿದ್ದಾರೆ ಎಂಬ ಆಕ್ರೋಶ ಭುಗಿಲೆದ್ದಿತು. ನಾಲ್ಕೇ ತಾಸಿನಲ್ಲಿ ಆ ಟ್ವೀಟ್‌ ಅನ್ನು ಮುಖ್ಯಮಂತ್ರಿ ಡಿಲೀಟ್‌ ಮಾಡಿದರು.

ಈ ನಡುವೆ, ಕೇಂದ್ರ ಸರ್ಕಾರದ ಎಲ್ಲ ಕಚೇರಿಗಳಲ್ಲಿ ತಮಿಳನ್ನು ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್‌ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಗವಿಮಠದಿಂದ ಫ್ರೀ ಕಾಲೇಜು, ಹಾಸ್ಟೆಲ್‌