
ರಾಂಪುರ, ಉತ್ತರ ಪ್ರದೇಶ (ಅ.06): ಭಾರತೀಯ ಸೇನೆಯು ನಡೆಸಿರುವ ಸರ್ಜಿಕಲ್ ದಾಳಿಯ ವಿಡಿಯೋವನ್ನು ಬಹಿರಂಗಪಡಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬುದ್ದಿವಂತಿಕೆಯ ಲಕ್ಷಣವಲ್ಲ ಎಂದು ಸಮಾಜವಾದಿ ಪಕ್ಷ ನಾಯಕ ಆಝಂ ಖಾನ್ ಹೇಳಿದ್ದಾರೆ.
ಸೇನೆಯು ನಡೆಸಿರುವ ಸರ್ಜಿಕಲ್ ದಾಳಿಯ ವಿಡಿಯೋವನ್ನು ಬಹಿರಂಗಪಡಿಸುವುದು ವಿವೇಕಪೂರ್ಣ ಕ್ರಮವಲ್ಲ. ಹಿಂದೆಯೂ ಸರ್ಜಿಕಲ್ ದಾಳಿಗಳನ್ನು ನಡೆಸಲಾಗಿತ್ತು, ಆದರೆ ಅವುಗಳ ವಿಡಿಯೋಗಳನ್ನು ಯಾವತ್ತೂ ಬಹಿರಂಗಪಡಿಸಲಾಗಿಲ್ಲ. ಅಂತಹ ದಾಳಿಗಳನ್ನು ಹೆಚ್ಚು ಪ್ರಚಾರ ಮಾಡಬಾರದು, ಎಂದು ಖಾನ್ ಹೇಳಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಸರ್ಜಿಕಲ್ ದಾಳಿಯ ವಿಡಿಯೋವನ್ನು ಸೇನೆಯು ನಿನ್ನೆ ಸರ್ಕಾರಕ್ಕೆ ಹಸ್ತಾಂತರಿಸಿದೆ.
ವಿಡಿಯೋವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದಕ್ಕೆ ಎನ್’ಸಿಪಿಯು ಕೂಡಾ ವಿರೋಧ ವ್ಯಕ್ತಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.