
ಬೆಂಗಳೂರು[ಸೆ.27] ಜಾತಿ ರಾಜಕಾರಣದ ವಿಚಾರದಲ್ಲಿ ಹೊರಬರುವ ಹೇಳಿಕೆಗಳು, ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುವ ಸುದ್ದಿಗಳಿಗೂ ಸಂಬಂಧವೇ ಇರುವುದಿಲ್ಲ. ಅಂಥದ್ದೇ ಒಂದು ಸುದ್ದಿ ಇಲ್ಲಿದೆ.
ಬಿಹಾರದಲ್ಲಿ ಕಾಂಗ್ರೆಸ್ ಪಕ್ಷ ಹಾಕಿದ್ದ ಬ್ಯಾನರ್ ಈ ಸುದ್ದಿಯ ಕೇಂದ್ರ ಬಿಂದು. ರಾಹುಲ್ ಗಾಂಧಿ ಅವರ ಫೋಟೋದ ಮುಂದೆ ಬ್ರಾಹ್ಮಣ ಸಮುದಾಯದ ಪ್ರತಿನಿಧಿ ಎಂದು ಈ ಬ್ಯಾನರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
ಇದನ್ನೇ ಇಟ್ಟುಕೊಂಡು ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರೆ ಮಾಳವಿಕ, ರಾಹುಲ್ ಬ್ರಾಹ್ಮಣರಂತೆ,, ಪ್ರತಿದನವೂ ಸಂಧ್ಯಾವಂದನೆ ಮಾಡುತ್ತಾರೆಯೇ? ಎಂದು ಪ್ರಶ್ನೆ ಎಸೆದಿದ್ದಾರೆ. ರಮ್ಯಾ ಸಹ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದಕ್ಕೆ ಪ್ರಕರಣ ಎದುರಿಸಬೇಕಾಗಿ ಬಂದಿದೆ.
ಒಟ್ಟಿನಲ್ಲಿ ಫೋಟೋ, ಬ್ಯಾನರ್ ಗಳು ಸಹ ಸುದ್ದಿಯಾಗುವ, ವಿವಾದ ಹುಟ್ಟುಹಾಕುವ ಮಟ್ಟಕ್ಕೆ ಬೆಳೆದಿದ್ದನ್ನು ಒಪ್ಪಿಕೊಳ್ಳಲೇಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.