ಗೆದ್ದರೂ ಕಾಂಗ್ರೆಸ್‌ಗೆ ತಲೆ ನೋವು: ಸಿಎಂ ಅಭ್ಯರ್ಥಿ ಆಯ್ಕೆ ಹೊಣೆ ಖರ್ಗೆ ಹೆಗಲಿಗೆ

Published : Dec 12, 2018, 11:22 AM IST
ಗೆದ್ದರೂ ಕಾಂಗ್ರೆಸ್‌ಗೆ ತಲೆ ನೋವು: ಸಿಎಂ ಅಭ್ಯರ್ಥಿ ಆಯ್ಕೆ ಹೊಣೆ ಖರ್ಗೆ ಹೆಗಲಿಗೆ

ಸಾರಾಂಶ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಹತ್ತಿರ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕುರ್ಚಿ ಪೈಪೋಟಿ ಜೋರಾಗಿದೆ. ಈ ಹಿನ್ನಲೆಯಲ್ಲಿ ಮಧ್ಯಪ್ರದೇಶ ಸಿಎಂ ಅಭ್ಯರ್ಥಿ ಆಯ್ಕೆಯನ್ನು ಕೈ ಹೈಕಮಾಂಡ್ ಕಲಬುರಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ ಹಾಕಿದೆ. 

ಬೆಂಗಳೂರು, [ಡಿ.12]  ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ರಿಸೆಲ್ಟ್ ಹೊರ ಬಿದ್ದಿದ್ದು, ಈ ಫಲಿತಾಂಶ ಎಲ್ಲರ ಊಹೆ ಉಲ್ಟಾ ಪಲ್ಟಾ ಮಾಡಿದೆ. 

ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡಿರುವ ಕಾಂಗ್ರೆಸ್ ಗೆದ್ದು ಬೀಗಿದೆ. ಆದ್ರೆ, ಇದೀಗ ಕಾಂಗ್ರೆಸ್ ಹೈಕಾಂಡ್ ಗೆ ಹೊಸ ತಲೆ ನೋವು ಶುರುವಾಗಿದೆ. 

ಪಂಚ ಫಲಿತಾಂಶ: ಯಾರ್ಯಾರಿಗೆ ಎಷ್ಟೆಷ್ಟು?..ಸಂಪೂರ್ಣ ವಿವರ

ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಹತ್ತಿರ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.

 ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಹತ್ತಿರ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಮಲ್‌ ನಾಥ್‌ ಅವರಾಗುತ್ತಾರಾ ಅಥವಾ ಜ್ಯೋತಿರಾದಿತ್ಯ ಸಿಂಧಿಯಾ ಅವರಾಗುತ್ತಾರಾ ಎಂಬುದು ಕುತೂಹಲ ಕೆರಳಿಸಿದೆ. 

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ಈ ಪ್ರಕ್ರಿಯೆಯ ಉಸ್ತುವಾರಿ ನೋಡಿಕೊಳ್ಳಲು ಹಿರಿಯ ನಾಯಕರಾದ ಕಲಬುರಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಎ.ಕೆ. ಆ್ಯಂಟನಿ ಅವರನ್ನು ಭೋಪಾಲ್‌ಗೆ ಕಳಿಸಿಕೊಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು