
ನವದೆಹಲಿ(ಜೂ.19): ಲೋಕಸಭೆ ಪ್ರತಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು ಲೋಕಪಾಲ್ ಆಯ್ಕೆ ಸಮಿತಿಯ ಸಭೆಯಲ್ಲಿ ತಾನು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಏಕೈಕ ಅತಿದೊಡ್ಡ ವಿರೋಧ ಪಕ್ಷದ ನಾಯಕರಾದ ಖರ್ಗೆ, ಸಮಿತಿಯಲ್ಲಿ ತಮಗೆ ಪೂರ್ಣ ಪ್ರಮಾಣದ ಸದಸ್ಯತ್ವ ನೀಡದೆ ಕೇವಲ ನಿಮಿತ್ತ ಮಾತ್ರಕ್ಕೆ ಆಹ್ವಾನಿಸಲಾಗಿದೆ ಎಂದು ದೂರಿದ್ದಾರೆ. ಲೋಕಪಾಲ್ ಆಯ್ಕೆ ಸಮಿತಿ ಸಭೆ ಇಂದು ಸಂಜೆ ನಿಗದಿಯಾಗಿದ್ದು, ಇದಕ್ಕೂ ಮುನ್ನ ನಡೆದಿದ್ದ ಸಭೆಗಳನ್ನು ಸಹ ಖರ್ಗೆ ಇದೇ ಕಾರಣಗಳನ್ನು ನೀಡಿ ಬಹಿಷ್ಕರಿಸಿದ್ದರು.
ಪ್ರಸ್ತುತ ಮೋದಿಗೆ ಬರೆದ ಪತ್ರದಲ್ಲಿ ಅವರು ತಮ್ಮ ಹಿಂದಿನ ಪತ್ರಗಳ ವಿಚಾರಗಳನ್ನು ಸಹ ಪ್ರಸ್ತಾಪಿಸಿದ್ದಾರೆ. ‘ಈ ಹಿಂದೆಯೇ ತಿಳಿಸಿದಂತೆ ಲೋಕಸಭೆಯಲ್ಲಿ ಅತಿ ದೊಡ್ಡ ವಿರೋಧ ಪಕ್ಷದ ನಾಯಕನಾದ ನನಗೆ ಲೋಕಪಾಲ್ ಆಯ್ಕೆ ಸಮಿತಿ ಸಭೆಯಲ್ಲಿ ಸರಿಯಾದ ಸ್ಥಾನ ನೀಡದ ಕಾರಣ ಸಭೆಯಲ್ಲಿ ನಾನು ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಲು ಇಚ್ಚಿಸುತ್ತೇನೆ’ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.
‘ನಿಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾಗಿದೆ. ಈ ಪ್ರಕ್ರಿಯೆಯಲ್ಲಿ ಪ್ರತಿಪಕ್ಷದ ಧ್ವನಿಗೆ ಸರ್ಕಾರ ನಿಜಕ್ಕೂ ಗೌರವ ಕೊಡುವುದಾದರೆ ಅದನ್ನು ಖಚಿತಪಡಿಸಲು ಅಗತ್ಯ ತಿದ್ದುಪಡಿಯನ್ನು ಜಾರಿಗೊಳಿಸಲುಬೇಕು’ ಎಂದು ಖರ್ಗೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.