
ಕೋಲ್ಕತಾ: ಗೋವಿನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂಷಿಸುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇದೀಗ ತಮ್ಮ ರಾಜ್ಯದ ಸಣ್ಣ ಹಾಗೂ ಅತಿಸಣ್ಣ ರೈತ ಕುಟುಂಬಗಳಿಗೆ ಗೋವುಗಳನ್ನು ಉಡುಗೊರೆ ನೀಡಲು ಮುಂದಾಗಿದ್ದಾರೆ. ತನ್ಮೂಲಕ ರೈತರನ್ನು ಸೆಳೆಯಲು ತಾವೂ ಗೋ ರಾಜಕಾರಣಕ್ಕೆ ಇಳಿದಿದ್ದಾರೆ.
ಹಾಲು ಮಾರಾಟ ಮೂಲಕ ರೈತರು ಆದಾಯ ಹೆಚ್ಚಿಸಿಕೊಳ್ಳಲು, ಸಗಣಿ ಬಳಸಿ ಪರಿಸರ ಸ್ನೇಹಿ ಇಂಧನ ತಯಾರಿಸಲು ಹಾಗೂ ಸಾವಯವ ಕೃಷಿಗೆ ಉತ್ತೇಜಿಸಲು ಮಮತಾ ಈ ಯೋಜನೆ ಹಮ್ಮಿಕೊಂಡಿದ್ದಾರೆ. ಈ ಯೋಜನೆಗೆ ಬಂಗಾಳ ಸರ್ಕಾರವೇ ಸಂಪೂರ್ಣ ಅನುದಾನ ಭರಿಸುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.